ಬೆಂಗಳೂರು: ರಾಜ್ಯ ಸರ್ಕಾರ 2023-24ನೇ ಸಾಲಿನಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ
ನೀಡುವ ಇನ್ಪುಟ್ ಸಬ್ಸಿಡಿ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ಪ್ರತಿವರ್ಷ ಮುಂಗಾರು ಹಾಗೂ ಹಿಂಗಾರು ಋತುವಿನಲ್ಲಿ ಭಾರಿ ಮಳೆಯಿಂದ ಹಾಗೂ ನದಿ ಹರಿವಿನಿಂದ ಉಂಟಾಗುವ ಪುವಾಹದಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿ ಆಗುತ್ತದೆ. ಪ್ರತಿ ವರ್ಷ ಬೆಳೆ ಹಾನಿ ಆಗುವ ಪ್ರಕರಣಗಳಿಗೆ ಎಸ್ಡಿಆರ್ಎ್/ಎನ್ಡಿಆರ್ಎ್ ಮಾರ್ಗಸೂಚಿಗಳಂತೆ ಅರ್ಹ ಪ್ರಕರಣಗಳಿಗೆ ಮಾತ್ರ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲಾಗುತ್ತಿದೆ.
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರವಾಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ಎಸ್ಡಿಆರ್ಎ್ / ಎನ್ಡಿಆರ್ಎ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆ ಹಾನಿಯಾದ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್ಪುಟ್ ಸಬ್ಸಿಡಿ ಮೊತ್ತವನ್ನು ಗರಿಷ್ಠ 2 ಹೆಕ್ಟೇರ್ಗೆ ಸೀಮಿತಗೊಳಿಸಿ ಪರಿಷ್ಕೃತ ದರದಲ್ಲಿ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ.
ಮಳೆಯಾಶ್ರಿತ ಬೆಳೆಗಳಿಗೆ ಮಾರ್ಗಸೂಚಿ ದರ 8,500 ರೂ. ಇದ್ದು ಅದನ್ನು 13,600 ರೂ.ಗೆ ನೀರಾವರಿ ಬೆಳೆಗಳಿಗೆ 17,000 ರೂ.ಗಳಿಂದ 22,500 ರೂ.ಗಳಿಗೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 22,000 ರೂ.ಗಳಿಂದ 28000 ರೂ.ಗೆ ಪರಿಷ್ಕರಿಸಲಾಗಿದೆ.
———————