ರಾಯಚೂರು: ಇಪ್ಪತ್ತೇಳು ವರ್ಷಗಳ ಹಿಂದಿನ ಪ್ರಕರಣವೊಂದು ನ್ಯಾಯಾಲಯದಲ್ಲಿ ಕೊನೆಗೂ ಇತ್ಯರ್ಥಗೊಂಡಿದ್ದು, ಆರೋಪಿಗಳಿಗೆ ಶಿಕ್ಷೆಯೂ ಘೋಷಣೆಯಾಗಿದೆ. ವಿಶೇಷ ಎಂದರೆ ಈ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ತಹಶೀಲ್ದಾರ್ ಅವರೇ ಆರೋಪಿಗಳಾಗಿದ್ದು, ಅವರ ಮೇಲಿನ ಆರೋಪ ಸಾಬೀತಾಗಿದೆ.
1994ರ ಜೂ. 1ರಂದು ನಡೆದ ಪ್ರಕರಣ ಸಂಬಂಧದ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದ್ದು, ಇನ್ಸ್ಪೆಕ್ಟರ್ ಕಾಶೀನಾಥ್ ಹಾಗೂ ತಹಶೀಲ್ದಾರ್ ರಾಮಾಚಾರಿ ಎಂಬವರಿಗೆ 3 ವರ್ಷಗಳ ಜೈಲು ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ಇದನ್ನೂ ಓದಿ: ಹೆಂಡತಿಯೊಂದಿಗೆ ಜಗಳ, ಇಬ್ಬರು ಗಂಡಂದಿರ ಸಾವು!
ರಾಯಚೂರಿನ ಮಾನ್ವಿಯ ಹರವಿ ಗ್ರಾಮದ ರೈತ ಮುಖಂಡರಾದ ಶಂಕರಗೌಡ ಹಾಗೂ ಬಸನಗೌಡರನ್ನು ಲಾಕಪ್ನಲ್ಲಿ ಹಾಕಿ ಥಳಿಸಿ ರಕ್ತಗಾಯ ಮಾಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪ ಅಂದಿನ ಮಾನ್ವಿ ಸಿಪಿಐ ಕಾಶೀನಾಥ್ ಹಾಗೂ ಮಾನ್ವಿ ತಹಶೀಲ್ದಾರ್ ರಾಮಾಚಾರಿ ವಿರುದ್ಧ ದಾಖಲಾಗಿತ್ತು.
ಆರ್ಡಿಸಿಸಿ ಬ್ಯಾಂಕ್ನೊಂದಿಗೆ ತಡಕಲ್ ಗ್ರಾಮದ ರೈತರ ದಿನಬಳಕೆ ವಸ್ತುವನ್ನು ಈ ಅಧಿಕಾರಿಗಳು ಜಪ್ತಿ ಮಾಡಿದ್ದರು. ಇದನ್ನು ತಡೆಯಲು ಯತ್ನಿಸಿದ್ದ ರೈತಮುಖಂಡರಿಗೆ ಅವಾಚ್ಯವಾಗಿ ಬೈದು ಕವಿತಾಳ ಠಾಣೆಯಲ್ಲಿ ಥಳಿಸಿದ ಕುರಿತು ಆರೋಪಿಸಿ ದೂರು ದಾಖಲಾಗಿತ್ತು. ಈ ಕುರಿತ ಪ್ರಕರಣ ರಾಯಚೂರು 3ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಇಂದು ತೀರ್ಪು ಪ್ರಕಟವಾಗಿದೆ.
ಇದನ್ನೂ ಓದಿ: ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!
ಏ. 15ರೊಳಗೆ ಕರೊನಾದಿಂದಾಗಿ ದೇಶದಲ್ಲಿ 50 ಸಾವಿರ ಜನರ ಸಾವು!; ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?