More

    ಇನ್​ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ನಿಧನ

    ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆ ಇತ್ತೀಚೆಗೆ ಸಸ್ಪೆಂಡ್ ಆಗಿದ್ದ ಇನ್​ಸ್ಪೆಕ್ಟರ್ ನಂದೀಶ್ ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಹುಣಸೂರು ಮೂಲದ ನಂದೀಶ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಕೆ.ಆರ್.ಪುರಂ ಪೊಲೀಸ್​ ಠಾಣೆಯಲ್ಲಿ ಇನ್​ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪಬ್​ವೊಂದಕ್ಕೆ ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಕೆಲಸದಿಂದ ಇತ್ತೀಚಿಗೆ ನಂದೀಶ್​ ಅವರನ್ನು ಅಮಾನತು ಮಾಡಲಾಗಿತ್ತು.

    ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಕೆ.ಆರ್.ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಗುರುವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

    ತಡರಾತ್ರಿ 2 ಗಂಟೆವರೆಗೂ ಟಾನಿಕ್​ ಬಾರ್​ ತೆರೆದಿತ್ತು. ಮಾಹಿತಿ ತಿಳಿದು ಸಿಸಿಬಿ ಪೊಲೀಸರು ಕಳೆದ ವಾರ ದಾಳಿ ನಡೆಸಿ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದರು. ಸಮಯ ಮೀರಿ ವಹಿವಾಟು ನಡೆಸುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ನಂದೀಶ್​ ವಿರುದ್ಧ ಕೇಳಿಬಂದಿತ್ತು.

    ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್​: ಮುಂದಿನ ವರ್ಷವೇ ದೇವಿಯ ದರ್ಶನ ಸಿಗೋದು

    ಮಹಡಿ ಮೇಲೆ ಒಣ ಹಾಕಿದ್ದ ಬಟ್ಟೆಗೆ ತಾಗಿದ ಪಟಾಕಿ ಕಿಡಿ: ಧಗಧಗಿಸಿದ ಮನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts