ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆ ಇತ್ತೀಚೆಗೆ ಸಸ್ಪೆಂಡ್ ಆಗಿದ್ದ ಇನ್ಸ್ಪೆಕ್ಟರ್ ನಂದೀಶ್ ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹುಣಸೂರು ಮೂಲದ ನಂದೀಶ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪಬ್ವೊಂದಕ್ಕೆ ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಕೆಲಸದಿಂದ ಇತ್ತೀಚಿಗೆ ನಂದೀಶ್ ಅವರನ್ನು ಅಮಾನತು ಮಾಡಲಾಗಿತ್ತು.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಕೆ.ಆರ್.ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಗುರುವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ತಡರಾತ್ರಿ 2 ಗಂಟೆವರೆಗೂ ಟಾನಿಕ್ ಬಾರ್ ತೆರೆದಿತ್ತು. ಮಾಹಿತಿ ತಿಳಿದು ಸಿಸಿಬಿ ಪೊಲೀಸರು ಕಳೆದ ವಾರ ದಾಳಿ ನಡೆಸಿ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದರು. ಸಮಯ ಮೀರಿ ವಹಿವಾಟು ನಡೆಸುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ನಂದೀಶ್ ವಿರುದ್ಧ ಕೇಳಿಬಂದಿತ್ತು.
ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್: ಮುಂದಿನ ವರ್ಷವೇ ದೇವಿಯ ದರ್ಶನ ಸಿಗೋದು