More

    ಅಪ್ಪುವನ್ನು ಅವಮಾನಿಸಿದ ಕಿಡಿಗೇಡಿಯ ಮನೆಗೆ ಪುನೀತ್ ಅಭಿಮಾನಿಗಳ ಮುತ್ತಿಗೆ; ಸ್ಥಳದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ

    ಮೈಸೂರು: ಪವರ್​​ಸ್ಟಾರ್ ಪುನೀತ್ ರಾಜಕುಮಾರ್ ವಿರುದ್ಧ ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಯುವಕನೊಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದು, ಆತನ ವಿರುದ್ಧ ಅಪ್ಪು ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

    ಯುವಕನೊಬ್ಬ ತಾನು ಲಿಂಗದೇವರು ಕೊಪ್ಪಲಿನಲ್ಲಿರುವುದು, ಇಂಥವರ ಸಹೋದರ ಎಂಬಿತ್ಯಾದಿಯಾಗಿ ಪರಿಚಯ ಮಾಡಿಕೊಂಡಿದ್ದು, ಬಳಿಕ ಅಪ್ಪು ಬಗ್ಗೆ ತೀರಾ ಅವಮಾನಕಾರಿಯಾಗಿ ಮಾತನಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಲಾರಂಭಿಸಿದ್ದು, ಪುನೀತ್ ಅಭಿಮಾನಿಗಳು ಇದರ ವಿರುದ್ಧ ಸಿಡಿದೆದ್ದಿದ್ದಾರೆ.

    ಅವಹೇಳನಕಾರಿ ವಿಡಿಯೋ ಮಾಡಿ ಹಂಚಿಕೊಂಡಿರುವ ನಟ ದರ್ಶನ ಅಭಿಮಾನಿ ಪುಟ್ಟ ಎಂಬಾತನ ಮನೆಗೆ ಪುನೀತ್ ರಾಜಕುಮಾರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಆತನ ಮನೆ ಮುಂದೆ ಧರಣಿ ನಡೆಸಿ ಅವನ ವಿರುದ್ಧ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.

    ನಗರದ ಹೊರಹೊಲಯದ ಬೆಳವಾಡಿ ಗ್ರಾಮದ ಹೆದ್ದಾರಿಯಲ್ಲಿ ಪುನೀತ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದು, ಅವಹೇಳನಕಾರಿಯಾಗಿ ಮಾತನಾಡಿದವನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಸ್ತೆ ತಡೆ ಕೂಡ ನಡೆಸಿದ್ದು, ಪುನೀತ್ ಫೋಟೋ ರಸ್ತೆ ಮಧ್ಯೆ ಇರಿಸಿ ಪ್ರತಿಭಟನೆ ನಡೆಸಿದ್ದಾರೆ. ಪುನೀತ್ ಅಭಿಮಾನಿಗಳನ್ನು ಮನವೊಲಿಸುವ ಯತ್ನ ಕೂಡ ಫಲಿಸುತ್ತಿಲ್ಲವಾದ್ದರಿಂದ ಸ್ಥಳದಲ್ಲಿ ಯಾವುದೇ ಅಹಿತಕಾರಿ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಇಲವಾಲ ಠಾಣೆ ಪೊಲೀಸರು ಲಿಂಗದೇವರುಕೊಪ್ಪಲಿಗೆ ಧಾವಿಸಿ ಸೂಕ್ತ ವ್ಯವಸ್ಥೆ ಕೈಗೊಂಡಿದ್ದಾರೆ.

    ರೂಪಾಯಿ ಕುಸಿತವಾಗುತ್ತಿಲ್ಲ, ಡಾಲರ್ ಸಶಕ್ತವಾಗುತ್ತಿದೆ: ಹಣದುಬ್ಬರವನ್ನು ಹೀಗೆ ಸಮರ್ಥಿಸಿಕೊಂಡ ವಿತ್ತಸಚಿವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts