ಹಾನಗಲ್ಲನಲ್ಲಿ ಅಂತರ್​ಜಿಲ್ಲಾ ಸರಗಳ್ಳನ ಬಂಧನ, ಚಿನ್ನಾಭರಣ ವಶ

blank

ಹಾನಗಲ್ಲ: ವಿವಿಧ ಜಿಲ್ಲೆಗಳಲ್ಲಿ ಸರಗಳ್ಳತನ ಕೃತ್ಯದಲ್ಲಿ ಪಾಲ್ಗೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹಾನಗಲ್ಲ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ 1,14,000 ರೂ. ಮೌಲ್ಯದ ಚಿನ್ನದ ಆಭರಣ ಹಾಗೂ ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.

ಹಿರಿಯೂರಿನ ಮೃತ್ಯುಂಜಯನಗರ ನಿವಾಸಿ ಗುರುಪ್ರಸಾದ ನಾಗರಾಜಪ್ಪ ಮರಾಠಿ(24) ಬಂಧಿತ. ಈತನ ವಿರುದ್ಧ ಚಿತ್ರದುರ್ಗ, ತುಮಕೂರು, ಗದಗ, ಬಳ್ಳಾರಿ, ಹಾವೇರಿ ಜಿಲ್ಲೆಗಳು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ, ಕೊಲೆ, ಸುಲಿಗೆ, ಮನೆ ಕಳವು, ದೇವಸ್ಥಾನ ಕಳವು ಸೇರಿದಂತೆ ಒಟ್ಟು 35ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈತ ಶ್ರೀಕಾಂತ ಗುಡಗೂರ (ಜೈಲ್ ವಾರ್ಡನ್) ಎಂಬ ವ್ಯಕ್ತಿಯೊಂದಿಗೆ ತನ್ನ ಸಹೋದರನ ಕೊಲೆ ಮಾಡಿರುವ ಆರೋಪವನ್ನೂ ಎದುರಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆ. 9ರಂದು ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಕುಮಾರನಗರದ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯೋರ್ವಳ 1,14,000 ರೂ. ಮೌಲ್ಯದ ಮಾಂಗಲ್ಯಸರ ಕಿತ್ತು ಪರಾರಿಯಾದ ಘಟನೆ ನಡೆದಿತ್ತು. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬೈಕ್​ನಲ್ಲಿ ಬಂದ ವ್ಯಕ್ತಿಯೋರ್ವ ಮಹಿಳೆಯ ಮಾಂಗಲ್ಯಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ. ಪ್ರಕರಣವನ್ನು ಭೇದಿಸಲು ಪೊಲೀಸರ ತಂಡವೊಂದನ್ನು ರಚಿಸಲಾಗಿತ್ತು. ಈ ತಂಡ ಬುಧವಾರ ಬೆಳಗ್ಗೆ ಹಾವೇರಿಯ ದನದ ಮಾರುಕಟ್ಟೆ ಬಳಿ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದು, ಇನ್ನುಳಿದ ಪ್ರಕರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ.

ಎಸ್​ಪಿ ಅಂಶುಕುಮಾರ, ಶಿಗ್ಗಾಂವಿ ಡಿಎಸ್​ಪಿ ಕೆ.ವಿ. ಗುರುಶಾಂತಪ್ಪ ಮಾರ್ಗದರ್ಶನದಲ್ಲಿ ಸಿಪಿಐ ಎನ್.ಎಚ್.ಆಂಜನೇಯ, ಪಿಎಸ್​ಐಗಳಾದ ಸಂಪತ್​ಕುಮಾರ ಆನೆಕಿವಿ, ದೀಪಾಲಿ ಗುಡೋಡಗಿ, ಸಿಬ್ಬಂದಿಗಳಾದ ಎಸ್.ಬಿ.ಕೂಸನೂರ, ಎನ್.ಎಚ್.ಡೋಲೆ, ಈರಣ್ಣ ಲಂಗೋಟಿ, ಬಾಹುಬಲಿ ಉಪಾಧ್ಯ, ಎಲ್.ಎಲ್.ಪಾಟೀಲ, ಇಲಿಯಾಸ್ ಶೇಖಸನದಿ, ಆನಂದ ಐ. ಪಾಟೀಲ, ಅನಿಲ ಮಡಿವಾಳರ, ಭೀಮಣ್ಣ ಗೋಡಿಹಾಳ, ಸಂತೋಷ ಮ್ಯಾಗೇರಿ, ಆನಂದ ಸಿ. ಪಾಟೀಲ, ಬಿ.ವಿ.ಹುರಕಡ್ಲಿ ಕಾರ್ಯಾಚರಣೆಯ ತಂಡದಲ್ಲಿದ್ದರು.

Share This Article

ಈ 3 ರಾಶಿಯಲ್ಲಿ ಜನಿಸಿದವರನ್ನು ಶಾಂತಿಯ ಪ್ರತಿರೂಪ ಎಂದು ಹೇಳಲಾಗುತ್ತೆ! ನೀವು ಯಾವ ರಾಶಿಯವರು? Zodiac Signs

Zodiac Signs: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ ಜನಿಸುತ್ತಾನೆ…

Summer Tips: ಬೇಸಿಗೆಯಲ್ಲಿ ಕೆಟ್ಟ ಬೆವರು ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

Summer Tips: ಬೇಸಿಗೆಯಲ್ಲಿ ಬೆವರು ವಾಸನೆಯನ್ನು ತಪ್ಪಿಸಲು, ನೀವು ಪ್ರತಿದಿನ ಸ್ನಾನ ಮಾಡುವುದು ಮತ್ತು ನಿಯಮಿತವಾಗಿ…

ಈ ಬೇಸಿಗೆಯಲ್ಲಿ ಯಾವ ರೀತಿಯ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು ಗೊತ್ತಾ? Summer Clothes

Summer Clothes: ಬೇಸಿಗೆಯಲ್ಲಿ ಸುಡುವ ಬಿಸಿಲು ಮತ್ತು ಬೆವರಿನಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಆಹಾರ ಕ್ರಮವನ್ನು ಬದಲಿಸಿಕೊಳ್ಳುತ್ತೇವೆ.…