More

    ಅಂತರಶಾಲಾ ಮಟ್ಟದ ಲಗೋರಿ ಕ್ರೀಡಾಕೂಟ ಇಂದು

    ಶನಿವಾರಸಂತೆ: ಸಮೀಪದ ಆಲೂರು ಸಿದ್ದಾಪುರ ಸಾಯಿ ಎಜುಕೇಷನ್ ಟ್ರಸ್ಟ್ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ 18ನೇ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಜ.18 ರಂದು ಬೆಳಗ್ಗೆ 10 ಗಂಟೆಗೆ ಅಂತರಶಾಲಾ ಮಟ್ಟದ ವಿದ್ಯಾರ್ಥಿಗಳ ಲಗೋರಿ ಕ್ರೀಡಾಕೂಟವನ್ನು ಶಾಲೆಯ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಸಾಯಿ ಎಜುಕೇಷನ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟಿ ಎಚ್.ಕೆ.ಶಿವಪ್ರಕಾಶ್ ತಿಳಿಸಿದ್ದಾರೆ.

    ಕ್ರೀಡಾಕೂಟವನ್ನು ಕಾರ್ಯನಿರತ ಸೈನಿಕ ವೈ.ಜೆ.ರೂಪೇಶ್ ಉದ್ಘಾಟಿಸಲಿದ್ದಾರೆ. ಸಾಯಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಟಿ.ಪಿ.ಜೀವನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಜ.19 ರಂದು ಶಾಲೆಯ ವಾರ್ಷಿಕೋತ್ಸವ ನಡೆಯಲಿದ್ದು, ಅಂದು ಬೆಳಗ್ಗೆ 10 ಗಂಟೆಯಿಂದ ಪಾಲಕರಿಗೆ ಕ್ರೀಡಾಕೂಟ ಹಮ್ಮಿಕೊಂಡಿದ್ದು ಸಾಯಿ ಎಜುಕೇಷನ್ ಟ್ರಸ್ಟ್ ನಿರ್ದೇಶಕ ಮಂಜುನಾಥ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಆಲೂರು ಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಉದಯಕುಮಾರ್ ಭಾಗವಹಿಸಲಿದ್ದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸಾಹಿ ಎಜುಕೇಷನ್ ಟ್ರಸ್ಟಿನ ಮ್ಯಾನೆಜಿಂಗ್ ಟ್ರಸ್ಟಿ ಎಚ್.ಕೆ.ಶಿವಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೆ ಶಾಸಕ ಡಾ.ಮಂತರ್‌ಗೌಡ, ಕುಶಾಲನಗರ ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ನಾಗೇಶ್, ಕೊಡಗು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜರು ಗಣಪತಿ, ಕರ್ನಾಟಕ ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ಅಧ್ಯಕ್ಷೆ ಡಿ.ಸುಜಲಾದೇವಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts