ಒಳಮೀಸಲಾತಿ ನೀಡುವಂತೆ ಸಚಿವ ಶಿವಾನಂದ ಪಾಟೀಲರು ರಾಜ್ಯ ಸರ್ಕಾರಕ್ಕೆ ಒತ್ತಡ ತರಲಿ

Internal Reservation, State Government, Basavanbagewadi, Scheduled Caste, Nandi Sugar Factory, Satyajita Patil, Shivananda Patil, Belgaum,

ಬಸವನಬಾಗೇವಾಡಿ: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರಿಗೆ ಬರೆದ ಮನವಿ ಪತ್ರವನ್ನು ಶನಿವಾರ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಖಂಡ ಬಸವನಬಾಗೇವಾಡಿ ತಾಲೂಕು ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಯ ಒಕ್ಕೂಟದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಸರ್ಕರದ ಮೇಲೆ ಒತ್ತಡ ತರಬೇಕು. ಡಿ.16 ರಂದು ಬೆಳಗಾವಿಯ ಹಕ್ಕೊತ್ತಾಯ ಸಮಾವೇಶದಲ್ಲಿ ತಾವು ಭಾಗವಹಿಸಬೇಕು ಎಂದು ಮನವಿ ಪತ್ರದಲ್ಲಿ ವಿನಂತಿಸಲಾಗಿದೆ.

ಒಕ್ಕೂಟದ ರಾಜ್ಯ ಸಂಚಾಲಕ ತಿಪ್ಪಣ್ಣ ಮಾದರ, ಜಿಲ್ಲಾ ಉಪಾಧ್ಯಕ್ಷ ಪ್ರಹ್ಲಾದ ಕರಿಯಣ್ಣವರ, ತಮ್ಮಣ್ಣ ಕಾನಾಗಡ್ಡಿ, ದುರುಗಪ್ಪ ದುರಗಪ್ಪಗೊಳ, ಪ್ರಕಾಶ ಬೀಳಗಿ, ರಮೇಶ ಮಾದರ, ಯಮನೂರಿ ಬೂದಿಹಾಳ, ಪರಶುರಾಮ ಚೌಡೇಕರ, ನಾಗರಾಜ ಚಳ್ಳಿಮರದ, ಲಕ್ಷ್ಮಣ ಆದವಾನಿ, ಕಲ್ಮೇಶ ಗುಡದಪ್ಪನವರ, ಮಹಾಂತೇಶ ಚಳ್ಳಿಮರದ, ಯಲಪ್ಪ ಚಳ್ಳಿಮರದ ಇತರರಿದ್ದರು.

Share This Article

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health

Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು…