ನವದೆಹಲಿ: ಕೋವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಅಂತರ ರಾಜ್ಯ ಮತ್ತು ಅಂತರ್ ರಾಜ್ಯ ಜನ ಸಂಚಾರಕ್ಕೆ ಮತ್ತು ಸರಕು ಸಾಗಣೆಗೆ ಇದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಆದೇಶ ಕಂಟೇನ್ಮೆಂಟ್ ವಲಯದ ಹೊರಗಡೆ ಮಾತ್ರ ಅನ್ವಯಿಸುವುದಾಗಿ ಸ್ಪಷ್ಟಪಡಿಸಿದೆ.
ಲಾಕ್ಡೌನ್ 4.0 ಮೇ 31ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜೂ.1ರಿಂದ ಆರಂಭವಾಗಲಿರುವ ಲಾಕ್ಡೌನ್ 5.0ದಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗಸೂಚಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ, ಅಂತರ್ ರಾಜ್ಯ ಮತ್ತು ಅಂತರ ರಾಜ್ಯ ಸಂಚಾರದ ವಿಷಯವಾಗಿ ಆಯಾ ರಾಜ್ಯ ಸರ್ಕಾರಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಹೇಳಿದೆ.
ಸಾರ್ವಜನಿಕ ಆರೋಗ್ಯ ಮತ್ತು ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರ್ಕಾರಗಳು ಅಂತರ್ ರಾಜ್ಯ ಮತ್ತು ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಬಹುದಾಗಿದೆ. ಸಂಚಾರ ನಿರ್ಬಂಧಿಸುವ ಅನಿವಾರ್ಯತೆ ಎದುರಾದಲ್ಲಿ, ಅದಕ್ಕೆ ಸೂಕ್ತ ಪ್ರಚಾರ ನೀಡಿ ಸಂಚಾರವನ್ನು ನಿರ್ಬಂಧಿಸಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಒಂದು ವರ್ಷದಲ್ಲಿ ಕೋವಿಡ್-19 ನಿರೋಧಕ ಚುಚ್ಚುಮದ್ದು ಸಿದ್ಧವಾಗೋದು ಅಸಾಧ್ಯ