ಹಬ್ಬಗಳಿಂದಲೇ ಭಾರತದ ಸಂಸ್ಕೃತಿಯ ಪರಿಚಯ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ಹಬ್ಬ-ಹರಿದಿನಗಳ ಆಚರಣೆಯಿಂದ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಪರಿಚಯವಾಗುತ್ತದೆ. ಮಕರ ಸಂಕ್ರಾಂತಿ ಹಬ್ಬ ಸೂರ್ಯನಿಗೆ ಸಮಪಿರ್ತವಾದ ಹಬ್ಬ. ಇದು ಸಮೃದ್ಧಿಯ ಸಂಕೇತ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸಿ ಮಕರ ರಾಶಿಗೆ ಪ್ರವೇಶಿಸುವುದರಿಂದ ಈ ಹಬ್ಬವನ್ನು ಮಕರ ಸಂಕ್ರಮಣ ಎನ್ನಲಾಗುತ್ತದೆ ಎಂದು ಜೆಎಸ್​ಎಸ್​ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು.
ನಗರದ ವಿದ್ಯಾಗಿರಿಯ ಜೆಎಸ್​ಎಸ್​ನ ಶ್ರೀ ಮಂಜುನಾಥೇಶ್ವರ ಸಿಬಿಎಸ್​ಇ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಅವರು ಮಾತನಾಡಿದರು.
ಸಂಕ್ರಾಂತಿ ಹಬ್ಬ ಧಾಮಿರ್ಕವಾಗಿ ಅಲ್ಲದೇ, ವೈಜ್ಞಾನಿಕ ದೃಷ್ಟಿಕೋನದಿಂದಲೂ ಪ್ರಾಮುಖ್ಯತೆ ಪಡೆದಿದೆ. ಇದು ಸಂಬಂಧಗಳನ್ನು ಬೆಸೆಯುವ ಹಬ್ಬ. ಸಿಹಿ ಹಂಚುವ ಮೂಲಕ ಮಕ್ಕಳು ತಂದೆ-ತಾಯಿ, ಗುರುಗಳು ಹಾಗೂ ಗೆಳೆಯರೊಂದಿಗೆ ಭಾಂಧವ್ಯವನ್ನು ಗಟ್ಟಿಯಾಗಿಸಿಕೊಳ್ಳಲಿ ಎಂದರು.
ನಂತರ ಮಕ್ಕಳಿಗೆ ಕರಿ ಎರೆದು ಹಬ್ಬದ ಊಟ ಉಣಬಡಿಸಿದರು. ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಂಕ್ರಾಂತಿ ಸಂತೆಯಲ್ಲಿ ಹಬ್ಬಕ್ಕೆ ಬೇಕಾಗುವ ವಿವಿಧ ರೀತಿಯ ವಸ್ತುಗಳು, ಆಹಾರ ಪದಾರ್ಥಗಳನ್ನು ಸ್ವ-ಉದ್ಯೋಗ ಮಾಡುತ್ತಿರುವ ಮಹಿಳೆಯರು ವಿದ್ಯಾರ್ಥಿಗಳ ಸಹಾಯದಿಂದ ಮಾರಾಟ ಮಾಡಿದರು. ಮಕ್ಕಳು ಸಾಂಸ್ಕೃತಿಕ ಉಡುಪುಗಳನ್ನು ತೊಟ್ಟು ಗಾಳಿಪಟಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದರು.
ಶಾಲೆ ಪ್ರಾಚಾರ್ಯೆ ಸಾಧನಾ ಎಸ್​., ಐಟಿಐ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಪಾಲಕರು, ಶಿಕ್ಷಕರು, ಸಿಬ್ಬಂದಿ, ಇತರರು ಇದ್ದರು.

Share This Article

ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla

Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್​ಬೆರಿ ಎಂದು ಕರೆಯಲಾಗುತ್ತದೆ. ಇದು…

ಮನೆಯಲ್ಲಿ ಈ 4 ವಸ್ತುಗಳಿದ್ದರೆ ಲಕ್ಷ್ಮಿ ಒಲಿಯುವುದಿಲ್ಲ! ಇದನ್ನು ಗಮನಿಸದೆ ಹೋದ್ರೆ ಕೈಯಲ್ಲಿ 1 ಪೈಸೆಯೂ ಉಳಿಯಲ್ಲ | Vastu Tips

Vastu Tips: ಇಂದು ಯಾರಿಗೆ ತಾನೇ ಧನಲಕ್ಷ್ಮಿ ಬೇಡ? ವಿದ್ಯೆ ಇಲ್ಲದೇ ಹೋದ್ರೂ ಪರವಾಗಿಲ್ಲ ಹಣವೇ…

ರಾತ್ರಿ 11 ಗಂಟೆ ಮೇಲೆ ನಿದ್ದೆ ಮಾಡುತ್ತಿದ್ದೀರಾ.. ಕಾದಿದೆ ನಿಮಗೆ ಅಪಾಯ; ತಜ್ಞರ ಕೊಟ್ಟ ಏಚ್ಚರಿಕೆ ಏನು ಗೊತ್ತೆ! | Sleep

Sleep:ಇಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ಹಲವು ಬದಲಾವಣೆಯಾಗಿವೆ. ಈ ಬದಲಾವಣೆಯಲ್ಲಿ ಒಂದು ರಾತ್ರಿ ಬೇಗ…