More

    ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಹಿಳೆಯ ತನಿಖೆಗೆ ಒಳಪಡಿಸಿ

    ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಂದಿಸಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಹಿಳೆಯನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು. ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ. ಜಿ.ಪರಮೇಶ್ವರ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.

    ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಗಳ ಕನಸು ನನಸಾಗಿದೆ. ಇಡೀ ಜಗತ್ತೇ ಸಂಭ್ರಮಿಸುತ್ತಿರುವ ಇಂತಹ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿರುವುದು ಖಂಡನೀಯ. ಈಗಾಗಲೇ ಎಸ್ಪಿ ಗಮನಕ್ಕೆ ತಂದಿದ್ದೇನೆ. ಅವರು ಅವಳು ಹುಚ್ಚಿ ಎಂದು ಹೇಳುತ್ತಿದ್ದಾರೆ. ಆದರೆ ಹುಚ್ಚಿಗೆ ಮೋದಿಗೆ ಬೈಯುವುದು, ಅಲ್ಲಾಹು ಅಕ್ಬರ್ ಎಂದು ಕೂಗುವುದು ಗೊತ್ತು. ಈ ಘಟನೆಯ ಸಂಪೂರ್ಣ ತನಿಖೆಯಾಗಿ ಇದರ ಹಿಂದೆ ಯಾವ ಶಕ್ತಿ ಇದೆ ಎಂಬುದು ಗೊತ್ತಾಗಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts