More

    ಯುವ ಕ್ರಿಕೆಟಿಗರ ಬಗ್ಗೆ ಕಮೆಂಟ್:​ ಧೋನಿ ವಿರುದ್ಧ ತಿರುಬಿದ್ದ ಟೀಮ್​ ಇಂಡಿಯಾ ಮಾಜಿ ನಾಯಕ!

    ನವದೆಹಲಿ: ಸೋಮವಾರ ನಡೆದ ಐಪಿಎಲ್​ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್​ ಎದುರು ಶರಣಾದ ಬೆನ್ನಲ್ಲೇ ಯುವ ಕ್ರಿಕೆಟಿಗರ ಬಗ್ಗೆ ಕಮೆಂಟ್​ ಮಾಡಿದ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಎಂ. ಎಸ್​. ಧೋನಿ ವಿರುದ್ಧ ಟೀಂ ಇಂಡಿಯಾದ ಮಾಜಿ ನಾಯಕ ಕ್ರಿಸ್​ ಶ್ರೀಕಾಂತ್​ ಅವರು ಅಸಮಾಧಾನ ಹೊರಹಾಕಿದ್ದಾರೆ.

    ಯುವ ಕ್ರಿಕೆಟಿಗರ ಬಗ್ಗೆ ಕಮೆಂಟ್:​ ಧೋನಿ ವಿರುದ್ಧ ತಿರುಬಿದ್ದ ಟೀಮ್​ ಇಂಡಿಯಾ ಮಾಜಿ ನಾಯಕ!ನಿನ್ನೆಯ ಪಂದ್ಯದಲ್ಲಿ 7 ವಿಕೆಟ್​ಗಳ ಅಂತರದಲ್ಲಿ ಧೋನಿ ಪಡೆ ಹೀನಾಯ ಸೋಲು ಕಂಡಿದ್ದು, ಟೂರ್ನಿಯಿಂದಲೇ ಹೊರಬೀಳುವ ಆತಂಕ ಎದುರಿಸುತ್ತಿದೆ. ಇದರ ನಡುವೆ ಪಂದ್ಯ ಮುಗಿದ ಬಳಿಕ ಮಾತನಾಡಿದ ಧೋನಿ, ಈ ಸೀಸನ್​ನಲ್ಲಿ ಕೆಲ ಯುವ ಕ್ರಿಕೆಟಿಗರಲ್ಲಿ ನಾವು ತುಡಿತ ಕಾಣಲಿಲ್ಲ. ಅವರಲ್ಲಿ ಆಟದ ಬಗ್ಗೆ ಯಾವುದೇ ಕಿಡಿ ಇರಲಿಲ್ಲ. ಮುಂದಿನ ಪಂದ್ಯಗಳಲ್ಲಿ ಅವರನ್ನು ಕರೆತರುವುದರಿಂದ ಯಾವುದೇ ಒತ್ತಡವಿಲ್ಲದೇ ಆಡಬಹುದು ಎಂದು ಟೀಕಿಸಿದ್ದಾರೆ.

    ಇದನ್ನೂ ಓದಿ: ಕಮಲ ಪಡೆಗೆ ಖುಷಿ ತಂದ ಆಂತರಿಕ ವರದಿ: ಬಿಜೆಪಿಯನ್ನು ಮೇಲೆತ್ತಿದ ಬಿ.ವೈ. ವಿಜಯೆಂದ್ರ

    ಧೋನಿ ಹೇಳಿಕೆಗೆ ತಿರುಗೇಟು ನೀಡಿರುವ ಕ್ರಿಸ್​ ಶ್ರೀಕಾಂತ್​, ಧೋನಿ ಓರ್ವ ಅತ್ಯುತ್ತಮ ಕ್ರಿಕೆಟಿಗ ಎಂಬುದರಲ್ಲಿ ಸಂಶಯವೇ ಇಲ್ಲ. ಆದರೆ, ರಾಜಸ್ಥಾನ ರಾಯಲ್ಸ್​ ವಿರುದ್ಧ ಸೋತ ಬಳಿಕ ಆಡಿದ ಮಾತುಗಳನ್ನು ಒಪ್ಪಲಾಗದು. ನೀವು ಪ್ರಕ್ರಿಯೆಯ ಬಗ್ಗೆ ಮಾತನಾಡುತ್ತಿದ್ದೀರಿ, ಆದರೆ ನಿಮ್ಮ ಆಯ್ಕೆಯ ಪ್ರಕ್ರಿಯೆಯೇ ತಪ್ಪಾಗಿದೆ ಎಂದು ಧೋನಿಯನ್ನು ಟೀಕಿಸಿದ್ದಾರೆ.

    ಕೇದರ್​ ಜಾಧವ್​ ನಿರಂತರ ವೈಫಲ್ಯ ಕಾಣುತ್ತಿದ್ದಾರೆ. 8 ಪಂದ್ಯಗಳಿಂದ ಕೇವಲ 62 ರನ್​ಗಳನ್ನು ಮಾತ್ರ ಗಳಿಸಿದ್ದಾರೆ. 24 ವರ್ಷದ ಎನ್​ ಜಗದೀಶನ್​ಗೆ ಆರ್​ಸಿಬಿ ವಿರುದ್ಧ ಒಂದು ಅವಕಾಶ ನೀಡಲಾಯಿತು. ಮೊದಲ ಪಂದ್ಯದಲ್ಲೇ 28 ಎಸೆತದಲ್ಲಿ 33 ರನ್​ ಗಳಿಸಿದ್ದರು. ಅವರಿಗೆ ಈ ಪಂದ್ಯದಲ್ಲೂ ಅವಕಾಶ ನೀಡಬಹುದಾಗಿತ್ತು. ಯುವಕರಲ್ಲಿ ತುಡಿತ ಇಲ್ಲ ಎನ್ನುತ್ತೀರಿ, ಹಾಗಾದರೆ ಜಾಧವ್​ರಲ್ಲಿ ತುಡಿತವಿದೆಯೇ? ಪಿಯುಷ್​ ಚಾವ್ಲಾರಲ್ಲಿ ಇದೆಯಾ? ಧೋನಿ ಮಾತು ಇದೆಲ್ಲ ಹಾಸ್ಯಸ್ಪದವಾಗಿದ್ದು, ಅವರು ನೀಡಿದ ಹೇಳಿಕೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಈಗಲಾದರೂ ಯುವಕರಿಗೆ ಅವಕಾಶ ನೀಡಿ ಎಂದರು. (ಏಜೆನ್ಸೀಸ್​)

    ರಾಯಲ್ಸ್‌ಗೆ ಶರಣಾದ ಸಿಎಸ್‌ಕೆ, ಟೂರ್ನಿಯಿಂದ ಹೊರಬೀಳುವ ಸನಿಹದಲ್ಲಿ ಧೋನಿ ಬಳಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts