ನೀರಾವರಿಗೆ 6.60 ಕೋಟಿ ರೂ. ಅನುದಾನ

blank

ಚಿಕ್ಕೋಡಿ: ರಾಜ್ಯ ಸರ್ಕಾರವು ಲಕ್ಷ್ಮೀದೇವಿ ಮತ್ತು ಬಸವೇಶ್ವರ ಏತ ನೀರಾವರಿ ಯೋಜನೆಗೆ 6.60 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದರಿಂದ 50 ರೈತ ಕುಟುಂಬಗಳ 175 ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

blank

ಚಿಕ್ಕೋಡಿ ಸದಲಗಾ ವಿಧಾನಸಭೆ ಕ್ಷೇತ್ರದ ಚಿಂಚಣಿ ಗ್ರಾಪಂ ವ್ಯಾಪ್ತಿಯ ಪ.ಜಾತಿಯ ರೈತರ ಜಮೀನುಗಳಿಗೆ ಮಂಜೂರಾದ ಏತ ನೀರಾವರಿ ಯೋಜನೆಗಳಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಈ ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ. ಹಾಗಾಗಿ ರೈತರು ನೀರಾವರಿ ಯೋಜನೆ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢಗೊಳ್ಳಬೇಕು ಎಂದು ತಿಳಿಸಿದರು.

ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿ, ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಒದಗಿಸುವ ನಿಟ್ಟಿನಲ್ಲಿ ಮಹಾಂತೇಶ ಕವಟಗಿಮಠ ಅವರು ಯೋಜನೆಗಳನ್ನುಅನುಷ್ಠಾನಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ಮುಂದಾಲೋಚನೆ ಮೆಚ್ಚುವಂತಹದ್ದು, ರೈತರು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.

blank

ತಾಲೂಕು ಪಂಚಾಯಿತಿ ಸದಸ್ಯ ಅಭಯ ಪಾಟಿಲ, ಸತೀಶ ಪಾಟಿಲ, ಅಪ್ಪಾಸಾಬ ಚೌಗಲಾ,ಲಕ್ಷ್ಮಣ ಢಂಗೇರ, ಸುಭಾಷ ಚೌಗಲಾ, ಸುಕುಮಾರ ಅಪ್ಪಾಜಿಗೋಳ ಸತೀಶ ಅಪ್ಪಾಜಿಗೋಳ, ಅನೀಲ ಪಾಟೀಲ, ಸುರೇಶ ಹೆಗಡೆ, ನೀರಾವರಿ ನಿಗಮದ ಅಧಿಕಾರಿ ಎಇಇ ಎಸ್.ಪಿ ಸದಾಶಿವ, ಎಸ್.ಓ. ಕಮಲಾಕರ ಹಾಗೂ ಚಿಂಚಣಿ ಗ್ರಾಮದ ರೈತರು ಇದ್ದರು.

Share This Article

ಪುಷ್ಯ ನಕ್ಷತ್ರಕ್ಕೆ ಸೂರ್ಯನ ಎಂಟ್ರಿ! ಈ ತಿಂಗಳು 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Astrology

Astrology : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜನಿಸಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಅವರ…

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…