ಹೈದರಾಬಾದ್: ಮಹಾಮಾರಿ ಕರೊನಾ ವೈರಸ್ ಸೋಂಕು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್ಡೌನ್ ಸೇರಿದಂತೆ ಅನೇಕ ಕ್ರಮಗಳನ್ನು ತೆಗದುಕೊಂಡಿವೆ. ಈ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿಕೆಗೆ ಬಾಲಿವುಡ್ ನಟಿ ಸೋನಮ್ ಕಪೂರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಕರೊನಾ ನಿಯಂತ್ರಣಕ್ಕೆ ಹೇರಲಾಗಿರುವ ಲಾಕ್ಡೌನ್ ಅನ್ನು ಉಲ್ಲಂಘಿಸಿದರೆ ಆರ್ಮಿಯನ್ನು ಕರೆಯಿಸಿ ಕಂಡಲ್ಲಿ ಗುಂಡಿಕ್ಕುವ ಆದೇಶವನ್ನು ನೀಡಬೇಕಾಗುತ್ತದೆ ಎಂದು ಸಿಎಂ ಚಂದ್ರಶೇಖರ್ ರಾವ್ ಅವರು ಆದೇಶ ಉಲ್ಲಂಘಿಸುತ್ತಿರುವ ಜನರಿಗೆ ನಿನ್ನೆ ಎಚ್ಚರಿಕೆ ನೀಡಿದ್ದಾರೆ.
ತೆಲಂಗಾಣ ಸಿಎಂ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸೋನಮ್, ನಿಜಕ್ಕೂ ನಾನು ಗೊಂದಲಕ್ಕೀಡಾದೆ… ಇದು ಸಾಮಾನ್ಯವೇ? ಎಂದು ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ.
ಕರೊನಾ ತಡೆಗಟ್ಟಲು ತೆಲಂಗಾಣದಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಕರ್ಪ್ಯೂ ಹೇರಲಾಗಿದೆ. (ಏಜೆನ್ಸೀಸ್)
I’m confused.. is this normal? https://t.co/APFZShwTtV
— Sonam K Ahuja (@sonamakapoor) March 25, 2020
ಕರೊನಾ ಸೋಂಕಿತ ಬಾಲಿವುಡ್ ಸಿಂಗರ್ ಕನ್ನಿಕಾ ಇದ್ದಕ್ಕಿದ್ದಂತೆ ಇನ್ಸ್ಟಾಗ್ರಾಂ ಪೋಸ್ಟ್ ಡಿಲೀಟ್ ಮಾಡಿದ್ದೇಕೆ?