More

    ತೆಲಂಗಾಣ ಸಿಎಂ ಎಚ್ಚರಿಕೆ ಸಂದೇಶ ಕೇಳಿ ನಿಬ್ಬೆರಗಾದ ಬಾಲಿವುಡ್​ ನಟಿ ಸೋನಮ್​ ಕಪೂರ್​!

    ಹೈದರಾಬಾದ್​: ಮಹಾಮಾರಿ ಕರೊನಾ ವೈರಸ್​ ಸೋಂಕು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್​ಡೌನ್​ ಸೇರಿದಂತೆ ಅನೇಕ ಕ್ರಮಗಳನ್ನು ತೆಗದುಕೊಂಡಿವೆ. ಈ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಹೇಳಿಕೆಗೆ ಬಾಲಿವುಡ್​ ನಟಿ ಸೋನಮ್​ ಕಪೂರ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ.

    ಕರೊನಾ ನಿಯಂತ್ರಣಕ್ಕೆ ಹೇರಲಾಗಿರುವ ಲಾಕ್​ಡೌನ್​ ಅನ್ನು ಉಲ್ಲಂಘಿಸಿದರೆ ಆರ್ಮಿಯನ್ನು ಕರೆಯಿಸಿ ಕಂಡಲ್ಲಿ ಗುಂಡಿಕ್ಕುವ ಆದೇಶವನ್ನು ನೀಡಬೇಕಾಗುತ್ತದೆ ಎಂದು ಸಿಎಂ ಚಂದ್ರಶೇಖರ್​ ರಾವ್​ ಅವರು ಆದೇಶ ಉಲ್ಲಂಘಿಸುತ್ತಿರುವ ಜನರಿಗೆ ನಿನ್ನೆ ಎಚ್ಚರಿಕೆ ನೀಡಿದ್ದಾರೆ.

    ತೆಲಂಗಾಣ ಸಿಎಂ ಹೇಳಿಕೆಗೆ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿರುವ ಸೋನಮ್​, ನಿಜಕ್ಕೂ ನಾನು ಗೊಂದಲಕ್ಕೀಡಾದೆ… ಇದು ಸಾಮಾನ್ಯವೇ? ಎಂದು ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ.

    ಕರೊನಾ ತಡೆಗಟ್ಟಲು ತೆಲಂಗಾಣದಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಕರ್ಪ್ಯೂ ಹೇರಲಾಗಿದೆ. (ಏಜೆನ್ಸೀಸ್​)

    ಕರೊನಾ ಸೋಂಕಿತ ಬಾಲಿವುಡ್​ ಸಿಂಗರ್​ ಕನ್ನಿಕಾ ಇದ್ದಕ್ಕಿದ್ದಂತೆ ಇನ್​ಸ್ಟಾಗ್ರಾಂ ಪೋಸ್ಟ್​ ಡಿಲೀಟ್​ ಮಾಡಿದ್ದೇಕೆ?

    ಕರೊನಾ ಲಾಕ್​ಡೌನ್​ನಲ್ಲಿ ಜನಜೀವನ ನಿರ್ವಹಣೆಗಾಗಿ ಆರ್ಥಿಕ ನೆರವಿನ ಪ್ಯಾಕೇಜ್​; ಕೇಂದ್ರ ಸರ್ಕಾರವನ್ನು ಹೊಗಳಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts