ಬೆಂಗಳೂರು: ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪೀಣ್ಯದಲ್ಲಿರುವ ಇಸ್ರೋ ನಿಯಂತ್ರಣ ಕೇಂದ್ರಕ್ಕೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಿದರು.
ಚಂದ್ರಯಾನ- 3ರ ಸಾಧನೆ, ಕಾರ್ಯನಿರ್ವಹಣೆ, ಮುಂದಿನ ಕಾರ್ಯಚಟುಟಿಕೆ ಬಗ್ಗೆ ವಿಜ್ಞಾನಿಗಳು ಸಿಎಂ ಬಳಿ ಮಾಹಿತಿ ಹಂಚಿಕೊಂಡರು.
ಈ ವೇಳೆ ಸಿಎಂ, ನಿಮ್ಮ ಪ್ರಯತ್ನ, ಶ್ರಮದಿಂದ ಇದೆಲ್ಲ ಸಾಧ್ಯವಾಗಿದ್ದು ನಾಡಿನ ಜನರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.
ಬುಧವಾರ ಸಂಜೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಸ್ರೋಗೆ ಭೇಟಿ ನೀಡಿ ಅಭಿನಂದಿಸಿದ್ದರು. ಆ.28 ರಂದು ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸುವರು.