ವಿಮಾ ಪರಿಹಾರ ಮೊತ್ತದ ಚೆಕ್ ವಿತರಣೆ

blank

ಮುಂಡರಗಿ: ತಾಲೂಕಿನ ಡೋಣಿ ಗ್ರಾಮದಲ್ಲಿ ಅಕಾಲಿಕವಾಗಿ ಮೃತಪಟ್ಟ ಆಕಳಿಗೆ 40 ಸಾವಿರ ರೂ. ವಿಮಾ ಪರಿಹಾರ ಮೊತ್ತದ ಚೆಕ್ ಅನ್ನು ಆಕಳು ಮಾಲೀಕರಾದ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಂಘದ ಸದಸ್ಯೆ ಲಕ್ಷ್ಮಿ ಗೋಣಿಸ್ವಾಮಿ ಅವರಿಗೆ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಲಿಂಗರಾಜಗೌಡ ಪಾಟೀಲ ಗುರುವಾರ ವಿತರಿಸಿದರು.

ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಲಿಂಗರಾಜಗೌಡ ಪಾಟೀಲ ಮಾತನಾಡಿ, ಹಸುಗಳಿಗೆ ಜೀವ ವಿಮೆ ಮಾಡಿಸಬೇಕು. ಒಕ್ಕೂಟ ಹಾಗೂ ಕೆಸಿಸಿ ಬ್ಯಾಂಕ್ ಹಾಗೂ ಇತರೆ ಇಲಾಖೆಗಳಿಂದ ಹಾಲು ಉತ್ಪಾದಕರಿಗೆ ಹಸು ಖರೀದಿಸಲು ಹೆಚ್ಚು ಹಣದ ಸೌಲಭ್ಯಗಳನ್ನು ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಸಂಘದ ಅಧ್ಯಕ್ಷೆ ಪ್ರೇಮ ಹರ್ತಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ಶೈಲಾ ನೀಲಪ್ಪಗೌಡ್ರ, ಸಂಘದ ನಿರ್ದೇಶಕರಾದ ನೀಲವ್ವ ಬನ್ನಿಕೊಪ್ಪ, ಚಂದ್ರಾವತಿ ಹರ್ತಿ, ಕಸ್ತೂರಿ ಅಜಗೊಂಡ, ಕವಿತಾ ಮಠಹಳ್ಳಿಕೆರಿ, ನೀಲವ್ವ ವಡ್ಡರ, ಉಮಾಶ್ರೀ ಪಾಟೀಲ ಇತರರು ಇದ್ದರು.

Share This Article

ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla

Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್​ಬೆರಿ ಎಂದು ಕರೆಯಲಾಗುತ್ತದೆ. ಇದು…

ಮನೆಯಲ್ಲಿ ಈ 4 ವಸ್ತುಗಳಿದ್ದರೆ ಲಕ್ಷ್ಮಿ ಒಲಿಯುವುದಿಲ್ಲ! ಇದನ್ನು ಗಮನಿಸದೆ ಹೋದ್ರೆ ಕೈಯಲ್ಲಿ 1 ಪೈಸೆಯೂ ಉಳಿಯಲ್ಲ | Vastu Tips

Vastu Tips: ಇಂದು ಯಾರಿಗೆ ತಾನೇ ಧನಲಕ್ಷ್ಮಿ ಬೇಡ? ವಿದ್ಯೆ ಇಲ್ಲದೇ ಹೋದ್ರೂ ಪರವಾಗಿಲ್ಲ ಹಣವೇ…

ರಾತ್ರಿ 11 ಗಂಟೆ ಮೇಲೆ ನಿದ್ದೆ ಮಾಡುತ್ತಿದ್ದೀರಾ.. ಕಾದಿದೆ ನಿಮಗೆ ಅಪಾಯ; ತಜ್ಞರ ಕೊಟ್ಟ ಏಚ್ಚರಿಕೆ ಏನು ಗೊತ್ತೆ! | Sleep

Sleep:ಇಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ಹಲವು ಬದಲಾವಣೆಯಾಗಿವೆ. ಈ ಬದಲಾವಣೆಯಲ್ಲಿ ಒಂದು ರಾತ್ರಿ ಬೇಗ…