More

    ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ


    ಜಮಖಂಡಿ(ಗ್ರಾ): ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನ ಎಂಬುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಎಲ್ಲರೂ ಮತದಾನ ಮಾಡಬೇಕು ಎಂದು ಪಿಡಿಒ ಉಮೇಶ ಸಾವಳಗಿ ಹೇಳಿದರು.

    ತಾಲೂಕಿನ ಅಡಿಹುಡಿ ಗ್ರಾಮದಲ್ಲಿ ಮತದಾನ ಜಾಗೃತಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಗೆ ಚಾಲನೆ ನೀಡಿ ಮಾತನಾಡಿ ಅವರು, ಮತದಾನ ಎಂದರೆ ಅಧಿಕಾರ ದಾನ ಎಂದು ಅರ್ಥ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಎಲ್ಲರ ಕಲ್ಯಾಣಕ್ಕಾಗಿ ನಾವೆಲ್ಲರೂ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಂಡು ಉತ್ತಮ ಪ್ರಜಾಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸಿ ಜನಪರ ಸರ್ಕಾರ ಸ್ಥಾಪಿಸಲು ಕಾರಣರಾಗಬೇಕು ಎಂದರು.

    ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಗ್ರಾಪಂ ಕಾರ್ಯದರ್ಶಿ ಚಂದ್ರವ್ವ ಗಡೆಪನ್ನವರ , ಗ್ರಾಪಂ ಸಿಬ್ಬಂದಿ, ಆಶಾ ಕಾರ್ಯಕರ್ತರು, ಇತರರು ಉಪಸ್ಥಿತರಿದ್ದರು.

    ಮತದಾನ ಜಾಗೃತಿಗಾಗಿ ಮನರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮ್ಯೂಜಿಕಲ್ ಚೇರ್ ಆಯೋಜಿಸಿ ಜನರನ್ನು ಮನರಂಜಿಸಲಾಯಿತು. ಗ್ರಾಮದಲ್ಲಿ ಸಂಚರಿಸುವ ಸಾರಿಗೆ ಬಸ್ ತಡೆದು, ಗ್ರಾಮದಲ್ಲಿ ನೆರೆದ ಸಂತೆಯಲ್ಲಿ ಮತದಾನ ಅರಿವು ಮೂಡಿಸುವ ಕೆಲಸ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts