ಹೈದರಾಬಾದ್: ಸಮಾಜದ ಎಲ್ಲಾ ವರ್ಗದ ಜನರಿಗಾಗಿ ಕೆಲಸ ಮಾಡಿರುವ ಪಕ್ಷದ ಸರ್ಕಾರವನ್ನು ತೆಲಂಗಾಣದಲ್ಲಿ ನೋಡುವುದು ತಮ್ಮ ಕನಸು ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಹೈದರಾಬಾದ್ನ ತುಕ್ಕುಗುಡ್ಡದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸೋನಿಯಾ ನಾವು ಈಗಾಗಲೇ ಆರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ನಾವು ಮಾತುಕೊಟ್ಟಂತೆ ಪ್ರತಿಯೊಂದನ್ನು ಈಡೇರಿಸಲಿದ್ದೇವೆ. ಮುಂಬರುವ ವಿಧಾನಸಭೆ ಚುನಾವನೆಯಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ: VIDEO| ಪಾಕಿಸ್ತಾನದ ಸೀಮಾಳಿಂದ ಪ್ರಧಾನಿ ಮೋದಿ ಜನ್ಮದಿನ ಆಚರಣೆ
ಮಹಾಲಕ್ಷ್ಮೀ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿತಿಂಗಳು 2,500 ರೂಪಾಯಿ ಹಣವನ್ನು ನೀಡಲಾಗುವುದು. ರಾಜ್ಯಾದ್ಯಂತರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಪ್ರತಿ ಸಿಲಿಂಡರ್ಅನ್ನು 500ರೂಪಾಯಿಗೆ ನೀಡಲಾಗುವುದು. ದಯವಿಟ್ಟು ನೀವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದಿದ್ದಾರೆ.
ತಲೆಂಗಾಣ ರಾಜ್ಯ ಉದಯವಾದ ಸಂದರ್ಭದಲ್ಲಿ ನಾನು ಮತ್ತು ಪಕ್ಷದ ಸಹೋದ್ಯೋಗಿಗಳು ಭಾಗಿಯಾಗಿದ್ದೆವು. ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಮ್ಮ ಕರ್ತವ್ಯವಾಗಿದೆ. ಸಮಾಜದ ಎಲ್ಲಾ ವರಗದ ಜನರಿಗಾಗಿ ದುಡಿದಿರುವ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ತೆಲಂಗಾಣದಲ್ಲಿ ನೋಡುವುದೆ ನನ್ನ ಗುರಿ ಎಂದು ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಹೇಳಿದ್ದಾರೆ.