More

    ಸೋಲು- ಗೆಲುವು ಸಮಭಾವದಿಂದ ಸ್ವೀಕರಿಸೋಣವೆಂದ ಬಿ.ವೈ.ವಿಜಯೇಂದ್ರ

    ಬೆಂಗಳೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ 15,000ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಂತೆಯೇ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೋಲು- ಗೆಲುವು ಸಮಭಾವದಿಂದ ಸ್ವೀಕರಿಸೋಣವೆಂದು ಟ್ವೀಟ್ ಮಾಡಿದ್ದಾರೆ.

    ಮತಗಳ ಎಣಿಕೆ ಮುಗಿದು ಅಧಿಕೃತ ಫಲಿತಾಂಶ ಪ್ರಕಟವಾಗುವ ಮುನ್ನವೇ ಜನಾದೇಶಕ್ಕೆ ತಲೆಬಾಗುತ್ತಾ ಸೋಲು-ಗೆಲುವು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕ್ಷೇತ್ರದ ಕಾರ್ಯಕರ್ತರು ಎದೆಗುಂದುವುದು ಬೇಡವೆಂದು ಹುರಿದುಂಬಿಸಿದ್ದಾರೆ.

    ಕ್ಷೇತ್ರದ ಚುನಾವಣಾ ಉಸ್ತುವಾರಿಗಳಲ್ಲಿ ಒಬ್ಬರಾದ ಬಿ.ವೈ.ವಿಜಯೇಂದ್ರ ತಮ್ಮದೇ ಆದ ತಂಡ ರಚಿಸಿಕೊಂಡು ಕೆ.ಆರ್.ಪೇಟೆ ಹಾಗೂ ಶಿರಾ ಮಾದರಿಯಲ್ಲಿ ಕಾರ್ಯತಂತ್ರ ರೂಪಿಸಿದ್ದನ್ನು ಸ್ಮರಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts