ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಜಾರಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬಹಿರಂಗ ಪಡಿಸಲಿ ಎಂದು ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದೆ.
ಸಿಎಎ ಮತ್ತು ಎನ್ಆರ್ಸಿ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಐಯುಎಂಎಲ್, ಗುರುವಾರ ನಡೆದ ವಿಚಾರಣೆಯಲ್ಲಿ ಸಿಎಎ ಮತ್ತು ಎನ್ಆರ್ಸಿಗಳನ್ನು ಕಾರ್ಯಗತಗೊಳಿಸುವುದನ್ನು ನಿಲ್ಲಿಸಲು ಕೇಂದ್ರಕ್ಕೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿತು.
ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದ ಐಯುಎಂಎಲ್, ಕಾಯ್ದೆಗಳ ಜಾರಿ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟಿಕರಣ ನೀಡಬೇಕು. ದೇಶಾದ್ಯಂತ ಜಾರಿಯಾಗಲು ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಬೇಕು ಮತ್ತು ಎನ್ಆರ್ಸಿ ಮತ್ತು ಸಿಎಎ ನಡುವಿನ ಸಂಬಂಧ ಏನು ಎಂಬುದನ್ನು ಸ್ಪಷ್ಟಪಡಿಸಲಿ ಎಂದಿತು.
ಕೇಂದ್ರ ಸರ್ಕಾರದ ಸಚಿವರು ಮತ್ತು ಪ್ರಧಾನಿ ಮೋದಿ ಅವರೂ ಎನ್ಆರ್ಸಿ ಮತ್ತು ಸಿಎಎಗೆ ಒಂದಕ್ಕೊಂದು ಸಂಬಂಧವಿಲ್ಲ ಎಂದು ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೆ ವಿರೋಧ ಪಕ್ಷಗಳು ಬಗ್ಗೆ ಇನ್ನೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿವೆ. (ಏಜೆನ್ಸೀಸ್)