ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಆಯೋಜಿಸಿರುವ ಎಸ್ಟಿ ನವ ಶಕ್ತಿ ಸಮಾವೇಶಕ್ಕೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಚಾಲನೆ ನೀಡಿದರು. ಕಳೆದ ತಿಂಗಳು ಜನಸಂಕಲ್ಪ ಯಾತ್ರೆ ನಡೆಸಿದ ಬೆನ್ನಲ್ಲೇ ಮೋರ್ಚಾಗಳ ಸಮಾವೇಶಕ್ಕೆ ಬಿಜೆಪಿ ಕೈಹಾಕಿದ್ದು, ಈ ಮೂಲಕ ವಿಧಾನಸಭಾ ಚುನಾವಣಾ ಕಹಳೆ ಮೊಳಗಿಸಿದೆ.
ಎಸ್ಟಿ ಮೋರ್ಚಾ ಸಮಾವೇಶದಲ್ಲಿ ಲಕ್ಷಾಂತೆ ಜನ ಸೇರಿದ್ದು, ಬುಡಕಟ್ಟು ಜನಾಂಗದ ಕೇಂದ್ರ ಸಚಿವ ಅರ್ಜುನ ಮುಂಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ನಾಯಕರಾದ ಭಗವಂತ ಕೂಬ, ಶೋಭಾ ಕರಂದ್ಲಾಜೆ ಮತ್ತು ಎಸ್ಟಿ ಸಮುದಾಯದ ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ 15 ಎಸ್ಟಿ ಮೀಸಲು ಕ್ಷೇತ್ರಗಳಿವೆ. ಈ ಪೈಕಿ ರಾಯಚೂರು-4, ಬಳ್ಳಾರಿ/ವಿಜಯನಗರ-5, ಯಾದಗಿರಿ ಒಂದು ಸೇರಿ 13 ಕ್ಷೇತ್ರಗಳು ಕಲ್ಯಾಣ ಕರ್ನಾಟಕದಲ್ಲಿವೆ. ಚಿತ್ರದುರ್ಗ 3, ಮೈಸೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಒಂದೊಂದು ಎಸ್ಟಿ ಮೀಸಲು ಕ್ಷೇತ್ರಗಳಿವೆ. ಸದ್ಯ 6 ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ 1 ಹಾಗೂ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ರಾಜ್ಯ ಸರ್ಕಾರ ಎಸ್ಟಿ ಮೀಸಲಾತಿಯನ್ನು ಶೇ.3 ರಿಂದ ಶೇ.7ಕ್ಕೆ ಹೆಚ್ಚಿಸಿದೆ. ಅದರ ಆಧಾರದ ಮೇಲೆ ಮೀಸಲು ಕ್ಷೇತ್ರಗಳ ಗೆಲುವಿಗೆ ಸಮಾವೇಶದ ಮೂಲಕ ರಣತಂತ್ರ ಹೆಣೆಯುತ್ತಿದೆ.
ಈ ಭಾಗದಲ್ಲೇ ಏಕೆ?: ಕಲ್ಯಾಣ ಕರ್ನಾಟಕ ಭಾಗದಲ್ಲೇ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯಗಳ ಸಂಖ್ಯೆ ಗರಿಷ್ಠವಾಗಿದೆ. ಸಮಾವೇಶಕ್ಕೆ ವೇದಿಕೆಯಾಗಿರುವ ಬಳ್ಳಾರಿಯ ಒಟ್ಟು ಜನಸಂಖ್ಯೆಯಲ್ಲಿ ಶೇ.18.41, ರಾಯಚೂರು ಶೇ.19.03, ಯಾದಗಿರಿ ಶೇ.12.51, ಚಿತ್ರದುರ್ಗ ಶೇ.18.23, ಬೀದರ್ ಶೇ.13.85, ಕೊಪ್ಪಳ ಶೇ.11.82 ಎಸ್ಟಿ ಸಮುದಾಯವಿದೆ. 2011ರ ಈ ಹಿನ್ನೆಲೆಯಲ್ಲಿ ಎಸ್ಟಿ ಸಮುದಾಯದ ಗರಿಷ್ಠ ಮತದಾರರನ್ನು ತಲುಪುವ ದೃಷ್ಟಿಯಿಂದ ಬಳ್ಳಾರಿಯಲ್ಲಿ ಸಮಾವೇಶ ಆಯೋಜಿಸಲಾಗಿದೆ.
ಶ್ರೀರಾಮುಲು ರಕ್ತ ಪವಿತ್ರ, ಮುಂದೊಂದು ದಿನ ಮುಖ್ಯಮಂತ್ರಿ ಆಗ್ತಾನೆ: ಸಿಎಂ ಬೊಮ್ಮಾಯಿ
ಮಾಲೂರಿಗೆ ಬಂದ ಪಂಚರತ್ನ ರಥಯಾತ್ರೆ: ದಾರಿಯುದ್ದಕ್ಕೂ ಎಚ್ಡಿಕೆ ಅದ್ದೂರಿ ಸ್ವಾಗತ, ಜೆಡಿಎಸ್ ಶಕ್ತಿ ಪ್ರದರ್ಶನ
ಮಂಗಳೂರಿನಲ್ಲಿ ಆಟೋ ಸ್ಫೋಟ: ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಅನುಮಾನ ಹುಟ್ಟಿಸಿದೆ ಪಂಪ್ವೆಲ್ಗೆ ಪ್ರಯಾಣ