More

    ಸುಪ್ರೀಂ​ ಮೊರೆ ಹೋದ ರಾಜ್ಯ ಸರ್ಕಾರ! ಇದು ಚುನಾವಣಾ ಸ್ಟಂಟ್​ ಎಂದ ಜಗದೀಶ್​ ಶೆಟ್ಟರ್​

    ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ರಾಜ್ಯ ಸರ್ಕಾರದ ನಿಲುವನ್ನು ಟೀಕಿಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್​, ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದು ರಾಜಕೀಯ ‌ಸ್ಟಂಟ್. ಚುನಾವಣೆ ಸಮೀಪಿಸುತ್ತಿದ್ದಂತೆ ಸುಪ್ರೀಂ ಮೊರೆ ಹೋಗುವಂತದ್ದೇನಿತ್ತು ಎಂದಿದ್ದಾರೆ.

    ಇದನ್ನೂ ಓದಿ: ಕಳ್ಳಬಟ್ಟಿ ಸೇವಿಸಿ 21 ಬಲಿ: 40 ಮಂದಿ ಅಸ್ವಸ್ಥ! ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ!

    “ಚುನಾವಣಾ ಸಮಯದಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಈ ತಂತ್ರ ರೂಪಿಸಲಾಗಿದೆ. ಅನುದಾನ ಬಂದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಇತಿಹಾಸದಲ್ಲಿ ಇದೇ ಮೊದಲು. ಈ ವಿಷಯವನ್ನು ಚರ್ಚಿಸಲು ಬೇರೆ ಬೇರೆ ವೇದಿಕೆಗಳಿವೆ. ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಚರ್ಚಿಸಬಹುದು. ರಾಜ್ಯ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರೇ ವಿರೋಧ ಪಕ್ಷದ ನಾಯಕರು. ಆದ್ರೆ ಅಲ್ಲಿ ಚರ್ಚಸುತ್ತಿಲ್ಲ. ಚುನಾವಣೆ ಪೂರ್ವದಲ್ಲಿ ದೆಹಲಿಗೆ ಹೋಗಿ ಹೋರಾಟ ಮಾಡುಯ ಸ್ಟಂಟ್ ಮಾಡಿದ್ದರು” ಎಂದರು.

    “ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಇದೆಲ್ಲವೂ ಚುನಾವಣೆ ಪ್ರಚಾರದ ಗಿಮಿಕ್ ಅಲ್ಲದೆ ಬೇರೇನೂ? ನರೇಂದ್ರ ಮೋದಿ ಸರ್ಕಾರ ಉತ್ತಮವಾದ ಕೆಲಸ ಮಾಡಿದೆ. ಕೇಂದ್ರ ಸರ್ಕಾರದ ಅನುದಾನ ವಿಳಂಬ ಆದಾಗ ರಾಜ್ಯ ಸರ್ಕಾರ ತನ್ನ ಬಳಿಯಿದ್ದ ಹಣ ಖರ್ಚು ಮಾಡಿದ ಉದಾಹರಣೆಯೂ ಇದೆ. ಸುಖಾಸುಮ್ಮನೆ ಮೋದಿಯವರ ವಿರುದ್ಧ ಅಪ್ರಚಾರ ಮಾಡುವುದು ಅಕ್ಷಮ್ಯ” ಎಂದು ಹೇಳಿದರು.

    ನನಗೆ ಸಾಕಾಗಿದೆ, 1 ಗಂಟೆಗೆ 5 ಲಕ್ಷ ರೂ. ಕೊಡಿ, ಬನ್ನಿ… ವೈರಲ್ ಆಗ್ತಿದೆ ಈ ನಿರ್ದೇಶಕನ ಹೇಳಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts