ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಅಳಿವಿಲ್ಲ

ಜಗಳೂರು: ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಅಳಿವಿಲ್ಲ. ಅದನ್ನು ಬೆಳೆಸಲು ಕನ್ನಡಿಗರು ಒಂದಾಗಬೇಕು ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಎಸ್.ಕೊಟ್ರೇಶ್ ಉಪ್ಪಾರ್ ಹೇಳಿದರು. ಕನ್ನಡ ಸಾಹಿತ್ಯ ವೇದಿಕೆಯಿಂದ ಇಲ್ಲಿನ ಗುರುಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ಘಟಕದ ಉದ್ಘಾಟನೆ, ಪ್ರಶಸ್ತಿ ಪ್ರಧಾನ ಮತ್ತು ಶಿಕ್ಷಕಿ ಕೆ.ಇಂದ್ರಮ್ಮ ಅವರ ’ಬಾನಯಾನ’, ಎಸ್.ಇನಾಯತ್ ಪಾಷಾ ಅವರ ‘ನೆಲ ಮುಗಿಲು’ ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು. ರಾಷ್ಟ್ರದ ಮೂಲೆ ಮೂಲೆಗಳಲ್ಲಿ ಕನ್ನಡಿಗರು ನಾಡು, ನುಡಿಗಾಗಿ ಬದುಕುತ್ತಿದ್ದಾರೆ. … Continue reading ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಅಳಿವಿಲ್ಲ