More

    ಕಾರಿನಿಂದ ಇಳಿದವರು ಹಿಂದಿರುಗುವಷ್ಟರಲ್ಲಿ ಹೊತ್ತಿ ಉರಿದಿತ್ತು ಜಾಗ್ವಾರ್..!

    ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಜಾಗ್ವಾರ್ ಕಾರು ಬೆಂಕಿಗೆ ಆಹುತಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂ.ಉತ್ತರ ತಾಲ್ಲೂಕು ಮಾದನಾಯಕನಹಳ್ಳಿ ಬಸ್ ನಿಲ್ದಾಣದ ಬಳಿ ಭಾನುವಾರ ನಡೆದಿದೆ.

    ಜಾಗ್ವಾರ್​ ಕಾರು ಕೋರಮಂಗಲ ನಿವಾಸಿ ನಿಶ್ಚಿತ್ ಎಂಬುವರಿಗೆ ಸೇರಿದ್ದಾಗಿದ್ದು, ಕಾರಿನಲ್ಲಿದ್ದ ನಿಶ್ಚಿತ್, ಪತ್ನಿ ಅಂಬಿಕ, ಸುಜಿತ್, ಪತ್ನಿ ಮೈತ್ರಿ ಅವಘಡದಿಂದ ಬಚಾವ್​ ಆಗಿದ್ದಾರೆ.

    ಇದನ್ನೂ ಓದಿ: ತೃಪ್ತಿ ದೇಸಾಯಿ ಶಬರಿಮಲೆ ಪ್ರವೇಶ ಯತ್ನದ ಹಿಂದೆ ಬಿಜೆಪಿ ಕೈವಾಡ?: ಫ್ಯಾಕ್ಟ್​ಚೆಕ್​ನಲ್ಲಿ ಸತ್ಯಾಂಶ ಬಯಲು!

    ಮೂಡಗೆರೆ ಮೂಲದ ನಿಶ್ಚಿತ್ ನೆಲಮಂಗಲದಲ್ಲಿರುವ ತಮ್ಮ ಪ್ರಾಪರ್ಟಿ ನೋಡಲು ಬಂದು ವಾಪಸ್ಸು ತೆರಳು ವೇಳೆ ಅವಘಡ ಸಂಭವಿಸಿದೆ. ಕಾರಿನ ಬಾನೆಟ್​ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಇಡೀ ಕಾರನ್ನೇ ಆಹುತಿ ಪಡೆದುಕೊಂಡಿತು.

    ಘಟನೆ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು-ಬೆಂಗಳೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಪಾಕಿಸ್ತಾನದಲ್ಲಿ ತಳ್ಳದೆ ಬಸ್​ ಕೂಡ ಮುಂದೋಗಲ್ಲ; ಭಯಂಕರ ಟ್ರೋಲ್​ ಆಗುತ್ತಿದೆ ಈ ವಿಚಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts