ಹಾವೇರಿ: ನೀರವ್ ಮೋದಿ, ಲಲಿತ್ ಮೋದಿಯ ಹೆಸರುಗಳಿಗೆ ಪ್ರಧಾನಿ ಮೋದಿ ಹೆಸರನ್ನು ತಳುಕು ಹಾಕಿ, ಮೋದಿ ಸರ್ನೇಮ್ ಇರುವವರೆಲ್ಲ ಹಾಗೆಯೇ ಎಂದು ಅವಹೇಳನಕಾರಿಯಾಗಿ ಮಾತಾಡಿದ್ದಕ್ಕೆ ಶಿಕ್ಷೆಗೆ ಗುರಿಯಾಗಿ, ಸಂಸದ ಸ್ಥಾನವನ್ನೂ ಕಳೆದುಕೊಂಡ ರಾಹುಲ್ ಗಾಂಧಿ ಇದೀಗ ಅದೇ ವಿಚಾರದಿಂದಲೇ ಹೋರಾಟ ನಡೆಸಲು ಮುಂದಾಗಿದ್ದಾರೆ.
ಹಾವೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ್ದಾರೆ. ಕೋಲಾರದಲ್ಲೇ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ರಾಹುಲ್ ಗಾಂಧಿ ಭಾಷಣ ಮಾಡಿದ್ದ ಕೋಲಾರದ ಅದೇ ಜಾಗದಲ್ಲೇ ಏ. 16ರಂದು ಜೈ ಭಾರತ ಸಮಾವೇಶ ಹಮ್ಮಿಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ನಂದಿನಿ-ಅಮುಲ್ ಸಂಘರ್ಷ: ಕೆಎಂಎಫ್ ಮಾಜಿ ಎಂಡಿ ಪ್ರೇಮನಾಥ್ ಏನಂತಾರೆ?
ಬಿಜೆಪಿಯವರು ರಾಹುಲ್ ಗಾಂಧಿಯವರ ವಿರುದ್ಧ ಮಾಡುತ್ತಿರುವ ಷಡ್ಯಂತ್ರದ ವಿರುದ್ಧದ ಹೋರಾಟ ಇದಾಗಿದ್ದು, ಅಂದು ರಾಹುಲ್ ಗಾಂಧಿಯವರೇ ಇದನ್ನು ಉದ್ಘಾಟಿಸಲಿದ್ದಾರೆ. ಅಂದಿನಿಂದ ಮೂರು ದಿನ ರಾಜ್ಯದಲ್ಲಿ ಅವರು ಪ್ರಚಾರ ಮಾಡುತ್ತಾರೆ ಎಂದು ಹೇಳಿದರು.
ನಾಪತ್ತೆ ಆಗಿದ್ದವಳ ಕಂಡು ದೇವತೆ ಅಂದುಕೊಂಡ ಜನರು!; ನೀರ ಮೇಲೆ ನಡೆದ ವಿಡಿಯೋ ವೈರಲ್
ಅಪರಿಚಿತರ ಬಳಿ ಲಿಫ್ಟ್ ಕೇಳಿಯೇ ಏಕಾಂಗಿಯಾಗಿ ಇಡೀ ರಾಜ್ಯ ಸುತ್ತಲಾರಂಭಿಸಿದ್ದಾಳೆ ಈ ಯುವತಿ: ಉದ್ದೇಶವಾದರೂ ಏನು?