More

    ಅಂತಿಮ ವರ್ಷ, ಸೆಮಿಸ್ಟರ್​ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲವೆಂದ ವಿಶ್ವವಿದ್ಯಾಲಯ

    ಬೆಂಗಳೂರು: ಕರೊನಾ ಸೋಂಕು ತಡೆಗಟ್ಟಲು ವಿಧಿಸಲಾಗಿದ್ದ ಲಾಕ್​ಡೌನ್​ ತೆರವಾಗುತ್ತಿದ್ದಂತೆ ಶೈಕ್ಷಣಿಕ ಚಟುವಟಿಕೆಗಳಿಗೂ ಅವಕಾಶ ದೊರೆಯಲಿದೆ ಎಂದೇ ಹೇಳಲಾಗಿತ್ತು. ಇದೇ ಕಾರಣಕ್ಕೆ ಹಲವು ರಾಜ್ಯ ಶಿಕ್ಷಣ ಮಂಡಳಿಗಳು ಹಾಗೂ ಸಂಸ್ಥೆಗಳು ಪರೀಕ್ಷೆ ದಿನಾಂಕ ಪ್ರಕಟಿಸಿದ್ದವು. ಆದರೆ, ಬದಲಾದ ಪರಿಸ್ಥಿತಿಯಲ್ಲಿ ನಿಗದಿಯಂತೆ ಪರೀಕ್ಷೆ ನಡೆಸುವುದು ಸಾಧ್ಯವೇ ಎಂಬ ಪರಿಸ್ಥಿತಿ ಎದುರಾಗಿದೆ.

    ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬೇಡ ಎಂದು ದೊಡ್ಡ ಕೂಗೆದ್ದಿದೆ. ಈ ನಡುವೆ ಹಲವು ರಾಜ್ಯಗಳಲ್ಲಿ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಹಲವು ವಿಶ್ವವಿದ್ಯಾಲಯಗಳು ಕೂಡ ಇದೇ ಹಾದಿ ಹಿಡಿದಿವೆ.

    ಇದನ್ನೂ ಓದಿ; ‘ಸೇಲ್ಸ್​ಮನ್​’ ಆಗಲಿಲ್ಲ ಶಿಕ್ಷಕ; ವಜಾಗೊಳಿಸಿದ ಸಂಸ್ಥೆ; ಬಾಳೆಹಣ್ಣು ಮಾರಾಟಕ್ಕಿಳಿದವನ ಕೈಹಿಡಿದ ವಿದ್ಯಾರ್ಥಿಗಳು

    ಅಂತೆಯೇ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಅಂತಿಮ ವರ್ಷ ಹಾಗೂ ಸೆಮಿಸ್ಟರ್​ಗಳ ಆಫ್​ಲೈನ್​ ಪರೀಕ್ಷೆಗಳನ್ನು ರದ್ದುಪಡಿಸಿದೆ.

    ಕರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲು ಪರಿಸ್ಥಿತಿ ಪೂರಕವಾಗಿಲ್ಲ. ಹೀಗಾಗಿ ಆನ್​ಲೈನ್​ ಪರೀಕ್ಷೆ ಹಾಗೂ ಅಸೈನ್​ಮೆಂಟ್​ ಆಧಾರದಲ್ಲಿ ಮೌಲ್ಯಮಾಪನ ನಡೆಸಲಾಗುವುದು. ಹೀಗಾಗಿ ವಿದ್ಯಾರ್ಥಿಗಳು ಆದಷ್ಟು ಬೇಗ ಆನ್​ಲೈನ್​ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕೆಂದು ವಿವಿ ಸೂಚಿಸಿದೆ.

    ಇದನ್ನೂ ಓದಿ; ಅಲ್ಪಸಂಖ್ಯಾತ ಹಿಂದುಗಳ ಕೈಗೆ ಶಸ್ತ್ರಾಸ್ತ್ರ ನೀಡಿ; ನಿವೃತ್ತ ಪೊಲೀಸ್​ ಮಹಾ ನಿರ್ದೇಶಕ ಒತ್ತಾಯ

    ವಿಶ್ವವಿದ್ಯಾಲಯವು ಜೂನ್​ 1ರಿಂದ 15ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಿತ್ತು. ಬಳಿಕ ಅದನ್ನು ಜೂನ್​ 30ರವರೆಗೆ ವಿಸ್ತರಿಸಿದೆ. ಜುಲೈ 1ರಿಂದ ನಡೆಸಲುದ್ದೇಶಿಸಲಾಗಿದ್ದ ಆಫ್​​ಲೈನ್​ ಪರೀಕ್ಷೆಯನ್ನು ರದ್ದುಪಡಿಸುವುದಾಗಿ ಘೋಷಿಸಿದೆ.

    https://www.vijayavani.net/murder-convicts-presence-at-wedding-of-kerala-cms-daughter-kicks-up-row/

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts