More

    ಕುಪ್ವಾರ-ಪುಲ್ವಾಮದಲ್ಲಿ ಮೂವರು ಉಗ್ರರ ಹತ್ಯೆ: ಅಡಗಿರುವ ಉಗ್ರರಿಗಾಗಿ ಮುಂದುವರಿದ ಶೋಧ

    ಶ್ರೀನಗರ: ಜಮ್ಮು -ಕಾಶ್ಮೀರದ ಕುಪ್ವಾರ ಮತ್ತು ಪುಲ್ವಾಮದಲ್ಲಿ ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 7 ಉಗ್ರರನ್ನು ಸದೆಬಡಿದಿದ್ದಾರೆ.

    ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಶೋಧ ಕಾರ್ಯಗೊಂಡ ವೇಳೆ ಸೇನೆಯ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನೆಯ ಪ್ರತಿ ದಾಳಿಗೆ ಮೂವರು ಉಗ್ರರು ಹತರಾಗಿದ್ದಾರೆ.

    ಕಳೆದ 20 ದಿನಗಳಲ್ಲಿ 24 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ನಡುವೆ ಇನ್ನೂ ಅಡಗಿರುವ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.ಈ ವರ್ಷದಲ್ಲಿ ಕಾಶ್ಮೀರ ಕಣಿವೆಯಲ್ಲಿ ಹತ್ಯೆಯಾಗಿರುವ 114 ಉಗ್ರರ ಪೈಕಿ 32ಮಂದಿ ಪಾಕ್​ ಮೂಲದವರಾಗಿದ್ದಾರೆ ಎಂದು ಐಜಿಪಿ ಕಶ್ಮಿರ್​ ವಿಜಯ್​ ಕುಮಾರ್​ ತಿಳಿಸಿದ್ದಾರೆ.

    ಸದ್ಯ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಉಗ್ರರು ಲಷ್ಕರ್​​ ಉಗ್ರ ಸಂಘಟನೆಯವರೆಂದು ಗುರುತಿಸಲಾಗಿದೆ. ಭಾರತೀಯ ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts