More

    ಜನಸ್ವರಾಜ್ ಯಾತ್ರೆ ನ.18ರಂದು ಕೊಪ್ಪಳ ಜಿಲ್ಲೆಗೆ ಆಗಮನ

    ಕೊಪ್ಪಳ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆ ಪ್ರಚಾರಕ್ಕಾಗಿ ಹಮ್ಮಿಕೊಂಡಿರುವ ಜನಸ್ವರಾಜ್ ಯಾತ್ರೆ ನ.18ರಂದು ಜಿಲ್ಲೆಗೆ ಆಗಮಿಸಲಿದೆ. ಅಂದು ಬೆಳಗ್ಗೆ 11ಕ್ಕೆ ನಗರದ ಸಾರ್ವಜನಿಕರ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡನಗೌಡ ಪಾಟೀಲ್ ತಿಳಿಸಿದರು.

    ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಕೊಪ್ಪಳದಲ್ಲಿ ಮೊದಲ ಸಮಾವೇಶ ಏರ್ಪಡಿಸಿದ್ದು ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಮುರುಗೇಶ ನಿರಾಣಿ, ಹಾಲಪ್ಪ ಆಚಾರ್, ಸಂಸದರಾದ ಪ್ರತಾಪ ಸಿಂಹ, ಸಂಗಣ್ಣ ಕರಡಿ, ಶಾಸಕರಾದ ಎನ್.ಮಹೇಶ, ರಾಜುಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ್ ಭಾಗಿಯಾಗಲಿದ್ದಾರೆ ಎಂದರು.

    ರಾಯಚೂರು-ಕೊಪ್ಪಳ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿ ಕಳಿಸಿದ್ದು, ಎರಡು ದಿನದಲ್ಲಿ ಅಭ್ಯರ್ಥಿ ಘೋಷಣೆಯಾಗಲಿದೆ. ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಿವರಾಜ ತಂಗಡಗಿ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಹೀಗಾಗಿ ತಂಗಡಗಿ ಬಿಜೆಪಿ ಬಗ್ಗೆ ಏನೇ ಮಾತನಾಡಿದರೂ ನಿರ್ಲಕ್ಷಿಸುವುದಾಗಿ ದೊಡ್ಡನಗೌಡ ತಿಳಿಸಿದರು. ವಿಭಾಗ ಸಹ ಪ್ರಭಾರಿ ಚಂದ್ರಶೇಖರ್ ಹಲಗೇರಿ, ಜಿಪಂ ಮಾಜಿ ಸದಸ್ಯ ಕೆ.ಮಹೇಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಗುಳಗಣ್ಣನವರ್, ಗಿರಿಶಾನಂದ ಜ್ಞಾನಸುಂದರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts