ವಾಹನಗಳ ಮೇಲೆ ನಿಗಾವಹಿಸಿ; ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ

blank

ಗಂಗಾವತಿ: ಪ್ರತಿಯೊಂದು ವಾಹನ ಮೇಲೆ ನಿಗಾವಹಿಸಬೇಕಿದ್ದು, ಅಧಿಕಾರಿಗಳು ಮಾದರಿ ನೀತಿ ಸಂಹಿತೆಯಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಸೂಚನೆ ನೀಡಿದರು.


ತಾಲೂಕಿನ ಜಂಗಮರಕಲ್ಗುಡಿಯಲ್ಲಿ ತೆರೆದಿರುವ ಚೆಕ್‌ಪೋಸ್ಟ್‌ಗೆ ಶನಿವಾರ ಭೇಟಿ ನೀಡಿ ಮಾತನಾಡಿದರು. ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿ ಕೂಲಂಕಷವಾಗಿ ವಾಹನಗಳ ತಪಾಸಣೆ ನಡೆಸಬೇಕು. ಚೆಕ್‌ಪೋಸ್ಟ್‌ನಲ್ಲಿ ಕುಡಿವ ನೀರು, ಬೆಳಕಿನ ವ್ಯವಸ್ಥೆ ಸೇರಿ ಇತರ ಸೌಲಭ್ಯ ಕಲ್ಪಿಸಲಾಗಿದೆ. ಗಂಗಾವತಿ-ಕಾರಟಗಿ ಸಂಪರ್ಕದ ಎಲ್ಲ ವಾಹನಗಳ ಮೇಲೂ ನಿಗಾವಹಿಸಬೇಕು. ಅನುಮಾನಾಸ್ಪದ ವಾಹನಗಳ ಬಗ್ಗೆ ಮಾಹಿತಿ ದೊರೆತರೆ ಕೂಡಲೇ ತಪಾಸಣೆ ಮಾಡಬೇಕು. ನೀತಿ ಸಂಹಿತಿ ಉಲ್ಲಂಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.


ತಾಪಂ ಇಒ ಮಹಾಂತಗೌಡ ಪಾಟೀಲ್, ಪಿಡಿಒ ರಾಮುನಾಯ್ಕ, ಪ್ರಭುರಾಜ್ ಪಾಟೀಲ್, ತೋಟಗಾರಿಕೆ ಇಲಾಖೆ ಎಡಿ ರೇವಣಪ್ಪ, ಚುನಾವಣೆ ಸಿಬ್ಬಂದಿ ಅಮರೇಶ, ದೇವೇಂದ್ರ, ತಾಪಂ ಸಹಾಯಕರಾದ ಭೀಮಣ್ಣ, ಶರಣಬಸಪ್ಪ, ಬಸವರಾಜ ಜಟಗಿ, ಬಾಳಪ್ಪ ತಾಳಕೇರಿ, ಮಲ್ಲಿಕಾರ್ಜುನ ಇತರರಿದ್ದರು.
ಮಾಹಿತಿ ಪಡೆದ ಎಸಿ: ನೀತಿ ಸಂಹಿತೆ ಪಾಲನೆ ಹಿನ್ನೆಲೆಯಲ್ಲಿ ಗಂಗಾವತಿ ನಗರಸಭೆ ಸಭಾಂಗಣದಲ್ಲಿ ವಿವಿಧ ಧರ್ಮಗಳ ಮುಖಂಡರ ಸಭೆ ಹಮ್ಮಿಕೊಳ್ಳಲಾಗಿತ್ತು. ಮಾದರಿ ನೀತಿ ಸಂಹಿತೆ ಪಾಲನೆ ಬಗ್ಗೆ ಚುನಾವಣೆ ಅಧಿಕಾರಿ ಹಾಗೂ ಎಸಿ ಬಸವಣ್ಣಪ್ಪ ಕಲ್ಲಶೆಟ್ಟಿ ಮಾಹಿತಿ ನೀಡಿದರಲ್ಲದೆ, ದೂರುಗಳಿದ್ದರೆ ಟೋಲ್ ಫ್ರೀ ನಂಬರ್‌ಗೆ ಕರೆ ಮಾಡಿ, ಇಲ್ಲವೇ ಸಿ-ವಿಜಿಲ್ ಆ್ಯಪ್‌ಗೆ ದಾಖಲೆ ಅಪಲೋಡ್ ಮಾಡುವಂತೆ ಸೂಚನೆ

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…