ಘಂಟ್ಯಾಪುರದಲ್ಲಿ ಶ್ರೀ ವೀರಭದ್ರೇಶ್ವರ ಕೆಂಡಾರ್ಚನೆ

blank

ಹೊನ್ನಾಳಿ: ತಾಲೂಕಿನ ಘಂಟ್ಯಾಪುರ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವರ ಕೆಂಡಾರ್ಚನೆ ಮತ್ತು ಜಾತ್ರಾ ಮಹೋತ್ಸವ ಧಾರ್ವಿುಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ನಡುವೆ ಮಂಗಳವಾರ ಸಂಭ್ರಮದಿಂದ ನಡೆಯಿತು.

ವೀರಭದ್ರೇಶ್ವರ ದೇವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮೂಲಕ ಪೂರ್ವ ಕಾಲದ ಹಳೆಯ ದೇವಸ್ಥಾನದ ಮುಂಭಾಗದಲ್ಲಿ ನಿರ್ವಿುಸಿದ್ದ ಹೊಂಡದವರೆಗೂ ತರಲಾಯಿತು. ಆನಂತರ ವಿಶೇಷ ಪೂಜೆಯೊಂದಿಗೆ ಪಲ್ಲಕ್ಕಿ ಹೊತ್ತ ಭಕ್ತರು ಕೆಂಡ ಹಾಯುವ ಮೂಲಕ ಭಕ್ತರಿಗೆ ಕೆಂಡ ಹಾಯಲು ಅನುವು ಮಾಡಿಕೊಟ್ಟರು. ಮುತ್ತೈದೆಯರು, ಹರಕೆ ಹೊತ್ತ ಭಕ್ತರು ಕೆಂಡ ತುಳಿದು ಭಕ್ತಿ ಸಮರ್ಪಿಸಿದರು. ಪುರವಂತರ ವೀರಗಾಸೆ ನೃತ್ಯ ಗಮನಸೆಳೆಯಿತು.

ಗ್ರಾ.ಪಂ. ಅಧ್ಯಕ್ಷೆ ಚಂದ್ರಕಲಾ ಶಿವಕುಮಾರ್, ಉಪಾಧ್ಯಕ್ಷ ಶಿವಕುಮಾರ ನಾಯ್ಕ, ಸದಸ್ಯರಾದ ಎಸ್.ಡಿ. ರಮೇಶನಾಯ್ಕ, ಲಕ್ಷ್ಮೀಬಾಯಿ, ಹನುಮಂತನಾಯ್ಕ, ಮಮತಾ ಅನಂತ ನಾಯ್ಕ, ಮುಖಂಡ ಕುಬೇರನಾಯ್ಕ, ವಕೀಲ ಕುಬೇರ ನಾಯ್ಕ, ತಾಂಡ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಮಾರುತಿ ನಾಯ್ಕ, ಜಿ.ಪಂ. ಮಾಜಿ ಸದಸ್ಯ ಸುರೇಂದ್ರ ನಾಯ್ಕ, ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಬುಧವಾರ ರಾತ್ರಿ ತರೀಕೆರೆಯ ಕುಮಾರ್ ಮೆಲೊಡಿ ಆಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಸಮಿತಿಯವರು ತಿಳಿಸಿದ್ದಾರೆ.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…