ವೈಭವದ ಆದ್ರಳ್ಳಿ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ

blank

ಲಕ್ಷ್ಮೇಶ್ವರ: ಆದ್ರಳ್ಳಿ ಗ್ರಾಮದ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಬುಧವಾರ ಶಿರಹಟ್ಟಿ ಸಂಸ್ಥಾನಮಠದ ಜ. ಶ್ರೀ ಫಕೀರ ಸಿದ್ಧರಾಮ ಮಹಾಸ್ವಾಮಿಗಳ ಅಡ್ಡಪಲ್ಲಕ್ಕಿ ಉತ್ಸವ ವೈಭವದಿಂದ ನೆರವೇರಿತು.

blank

ಆದ್ರಳ್ಳಿ ಶ್ರೀಕುಮಾರ ಮಹಾರಾಜರ ನೇತೃತ್ವದಲ್ಲಿ ನಡೆದ ಉತ್ಸವದಲ್ಲಿ ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಮತ್ತು ಅವರ ಪುತ್ರನ ಮೆರವಣಿಗೆ ನಡೆಯಿತು.

ಫಕೀರ ಸಿದ್ಧರಾಮ ಜಗದ್ಗುರುಗಳು ಶ್ರೀಮಠದ ಸಂಪ್ರದಾಯದಂತೆ ಧಿರಿಸುಗಳನ್ನು ಧರಿಸಿಕೊಂಡು ಅಡ್ಡಪಲ್ಲಕ್ಕಿ ಏರಿ ಆಶೀರ್ವಾದ ನೀಡಿದರು. ಗ್ರಾಮದಿಂದ ಪ್ರಾರಂಭವಾದ ಮೆರವಣಿಗೆ ಗವಿಸಿದ್ಧೇಶ್ವರ ಗುಡ್ಡದವರೆಗೂ ಸಾಗಿಬಂದಿತು. ಮೆರವಣಿಗೆಯಲ್ಲಿ ಆನೆ, ಒಂಟೆ, ಡೊಳ್ಳು, ನಂದಿಕೋಲ ಕುಣಿತ, ಸೇರಿ ವಿವಿಧ ಕಲಾ ತಂಡಗಳು, ಸಕಲ ವಾಧ್ಯ ವೈಭವಗಳು ಮೇಳೈಸಿದವು. ಗ್ರಾಮದ ನೂರಾರು ಮಹಿಳೆಯರು ತಲೆಯ ಮೇಲೆ ಬುತ್ತಿ, ಪೂರ್ಣ ಕುಂಭ ಹೊತ್ತು ಸಾಗಿದ್ದು ವಿಶೇಷವಾಗಿತ್ತು. ಸಹಸ್ರಾರು ಭಕ್ತರು ಫಕೀರ ಸಿದ್ಧರಾಮ ಮಹಾಸ್ವಾಮಿಜಿ ಕೀ ಜೈ ಎಂಬ ಉದ್ಘೋಷಗಳು ಮುಗಿಲು ಮುಟ್ಟಿದ್ದವು,

blank

ಶ್ರೀ ಮಹಾಂತ ಬಸವಲಿಂಗ ಮಹಾಸ್ವಾಮಿಗಳು, ಉಮೇಶ ವಡ್ಡರ, ನಾಗೇಶ ಲಮಾಣಿ, ಚನ್ನಪ್ಪ ಲಮಾಣಿ, ಅಲ್ಲಾಭಕ್ಷ ವಾಲಿಕಾರ, ಮಾಂತೇಶ ಹರಿಜನ, ಶಂಕರಗೌಡ ಪಾಟೀಲ, ಶೇಖಪ್ಪ ಲಮಾಣಿ, ದೇವಪ್ಪ ಲಮಾಣಿ, ಸುರೇಶ ಲಮಾಣಿ, ಚಂದ್ರಕಾಂತ ಲಮಾಣಿ, ಶೇಖಪ್ಪ ನಾಯಕ, ಪರಮೇಶ ಲಮಾಣಿ ಇದ್ದರು.

Share This Article

ಪುಷ್ಯ ನಕ್ಷತ್ರಕ್ಕೆ ಸೂರ್ಯನ ಎಂಟ್ರಿ! ಈ ತಿಂಗಳು 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Astrology

Astrology : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜನಿಸಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಅವರ…

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…