ಚಿಕ್ಕ ಬೊಮ್ಮನಹಳ್ಳಿಯಲ್ಲಿ 28ರಂದು ರಥೋತ್ಸವ

blank

 ಅರಕಲಗೂಡು : ಇತಿಹಾಸ ಪ್ರಸಿದ್ಧ ಚಿಕ್ಕ ಬೊಮ್ಮನಹಳ್ಳಿ ಶ್ರೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ಮಾ. 28ರಂದು ನೆರವೇರಲಿದೆ. ಸುಕ್ಷೇತ್ರದಲ್ಲಿ ಹಲವು ದಶಕಗಳಿಂದ ರಂಗನಾಥಸ್ವಾಮಿ ಜಾತ್ರೆ ಪ್ರಸಿದ್ಧಿ ಗಳಿಸಿದೆ. ಡಾ. ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಈ ಬಾರಿಯೂ ವಿಜೃಂಭಣೆಯಿಂದ ಜಾತ್ರೆ ಜರುಗಲಿದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ರಥೋತ್ಸವದ ಅಂಗವಾಗಿ ಮಾ. 27ರಂದು ಸಂಜೆ ಗೋಧೂಳಿ ಲಗ್ನದಲ್ಲಿ ಧರ್ಮ ಧ್ವಜ ಸ್ಥಾಪನೆ ನೆರವೇರಿಸುವ ಮೂಲಕ ಧಾರ್ಮಿಕ ವಿಧಿಗಳಿಗೆ ಚಾಲನೆ ನೀಡಲಾಗುವುದು. 28ರ ಬೆಳಗ್ಗೆ ಸ್ವಾಮಿಯ ಮೂಲ ವಿಗ್ರಹಕ್ಕೆ ಅಭಿಷೇಕ, ಪುಣ್ಯಾಹ, ಹೋಮ, ವಿವಿಧ ಪೂಜೆ ನಡೆಯಲಿವೆ. ಸಂಜೆ 4ಕ್ಕೆ ರಂಗನಾಥಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಲಿದೆ. ಬಳಿಕ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಸಹಕಾರ ನೀಡಬೇಕು ಎಂದರು. ಅರಕಲಗೂಡು ಬಿಜಿಎಸ್ ಕಾಲೇಜು ಪ್ರಾಂಶುಪಾಲ ಮಹೇಶ್ ಹೊಡೆನೂರು ಇದ್ದರು.

blank
TAGGED:
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…