ಬೆಂಗಳೂರು: ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ಕೆ.ಎಸ್. ರವೀಂದ್ರನಾಥ್ ಅವರನ್ನು ನೇಮಿಸಿ ಸರ್ಕಾರ ಅದೇಶ ಹೊರಡಿಸಿದೆ.
ಡಾ. ಸಿ.ಎನ್. ಮಂಜುನಾಥ್ ಅವರ ಅಧಿಕಾರವಧಿ ಬುಧವಾರ ಮುಕ್ತಾಯಗೊಂಡಿದ್ದು, ಅವರು ಡಾ. ಕೆ.ಎಸ್. ರವೀಂದ್ರನಾಥ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಹಿಂದೆ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್ಜಿಯುಎಚ್ಎಸ್) ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಡಾ. ಕೆ.ಎಸ್. ರವೀಂದ್ರನಾಥ್ ಪ್ರಸ್ತುತ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರ ಇವರನ್ನು ಮುಂದಿನ ಆದೇಶದವರೆಗೂ ಪ್ರಭಾರ ನಿರ್ದೇಶಕರಾಗಿ ನೇಮಿಸಿ ಆದೇಶ ಹೊರಡಿಸಿದೆ.