More

    ದೇವೇಗೌಡರಿಗೆ ಮತ್ತೊಮ್ಮೆ ಗಡುವು ನೀಡಿದ ಇಬ್ರಾಹಿಂ

    ಬೆಂಗಳೂರು:
    ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನಮ್ಮ ಮಾತನ್ನು ಕೇಳದೆ ಇದ್ದರೆ, ಡಿ.11 ಬಳಿಕ ನಮ್ಮ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮತ್ತೊಮ್ಮೆ ಗಡುವು ನೀಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡರು ಒತ್ತಡಕ್ಕೆ ಒಳಗಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಸ್ವಂತ ತೀರ್ಮಾನ ತೆಗೆದುಕೊಂಡಿಲ್ಲ ಎನ್ನುವುದು ಗೊತ್ತಿರುವ ಸಂಗತಿ. ಇದೇ ಅಭಿಪ್ರಾಯ ಶಾಸಕರಲ್ಲಿಯೂ ಇದೆ ಎಂದರು.
    ಈಗಾಗಲೇ ಐವರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಾವು ತೆಗೆದುಕೊಳ್ಳುವ ತೀರ್ಮಾನ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು ಎನ್ನುವ ಕಾರಣಕ್ಕೆ ಮತ್ತೊಮ್ಮೆ ಬಿಜೆಪಿ ಜೊತೆಗೆ ಮೈತ್ರಿ ವಿಚಾರವನ್ನು ಪುನರ್ ಪರಿಶೀಲನೆ ಮಾಡಲಿ ಎಂದು ಗಡುವು ನೀಡಿ ತಿಳಿಸುತ್ತಿದ್ದೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts