More

    ಬಳಿಗಾರ್‌ಗೆ ಸೂಕ್ತ ಸ್ಥಾನಮಾನ: ಯಡಿಯೂರಪ್ಪ ಭರವಸೆ

    ಶಿವಮೊಗ್ಗ: ಬಿಜೆಪಿ ತತ್ವ, ಸಿದ್ಧಾಂತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿಕೊಂಡು ಬಿಜೆಪಿಗೆ ಬಂದಿರುವ ನಿವೃತ್ತ ಕೆಎಎಸ್ ಅಧಿಕಾರಿ ಎಚ್.ಟಿ.ಬಳಿಗಾರ್ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
    ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಉದ್ದಿಮೆಗಳಲ್ಲಿ ಎರಡು ದಶಕಕ್ಕೂ ಅಧಿಕ ಕಾಲ ಕರ್ತವ್ಯ ನಿರ್ವಹಿಸಿರುವ ಬಳಿಗಾರ್ ಅವರು ರೈತ ಕುಟುಂಬದಿಂದ ಬಂದಿದ್ದು, ಹಲವಾರು ರೈತಪರ ಕಾರ್ಯಕ್ರಮಗಳ ರೂವಾರಿಯಾಗಿದ್ದಾರೆ ಎಂದು ಹೇಳಿದರು.
    ನಾಲ್ಕಾರು ವರ್ಷ ಅಧಿಕಾರಾವಧಿ ಇದ್ದರೂ ಸ್ವಯಂ ನಿವೃತ್ತಿ ಪಡೆದು 2013ರಲ್ಲಿ ರಾಜಕೀಯ ಪ್ರವೇಶಿಸಿದ ಅವರು ಅದೇ ವರ್ಷ ಜೆಡಿಎಸ್‌ನಿಂದ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ 16,500 ಮತ್ತು 2018ರಲ್ಲಿ 13,700 ಮತ ಪಡೆದಿದ್ದರು. ಅವರನ್ನು ಹಲವಾರು ವರ್ಷಗಳಿಂದ ಪಕ್ಷಕ್ಕೆ ಕರೆತರಲು ಪ್ರಯತ್ನ ನಡೆಸಲಾಗಿತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಅವರೇ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಶಿಕಾರಿಪುರ ಕ್ಷೇತ್ರ ಮತ್ತು ಜಿಲ್ಲೆಯಲ್ಲಿ ಮತ್ತಷ್ಟು ಬಲ ಹೆಚ್ಚುವಂತೆ ಮಾಡಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts