2004ರ ಬಳಿಕ ವರ್ಚಸ್ಸು ಕಳೆದುಕೊಂಡ ಜೆಡಿಎಸ್: ಈ ಬಾರಿ ತೆನೆ ಹೊತ್ತ ಮಹಿಳೆಗೆ ಭಾರೀ ಹಿನ್ನಡೆ

JDS

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶದ ಮೇಲೆ ಭಾರೀ ನಿರೀಕ್ಷೆಯಲ್ಲಿದ್ದ ಜೆಡಿಎಸ್​ ಪಕ್ಷಕ್ಕೆ ಈ ಬಾರಿಯು ಭಾರೀ ನಿರಾಶೆಯಾಗಿದೆ. 2004ರ ಬಳಿಕ ಜೆಡಿಎಸ್​ ಪಕ್ಷ ವರ್ಚಸ್ಸು ಕಳೆದುಕೊಂಡಿದ್ದು, ಮೇಲಕ್ಕೇರಲು ಹರಸಾಹಸ ಪಡುತ್ತಿದೆ.

ಈ ಬಾರಿಯೂ ಜೆಡಿಎಸ್​ಗೆ ಭಾರೀ ಹಿನ್ನಡೆಯಾಗಿದೆ. 2004ರಿಂದ ಇಲ್ಲಿಯವರೆಗೂ ಗಮನಿಸಿದರೆ ಈ ಬಾರಿ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯ, ದೇವೇಗೌಡರ ಜಂಟಿ ನಾಯಕತ್ವದಲ್ಲಿ ಜೆಡಿಎಸ್​ 58 ಸ್ಥಾನ ಗೆದ್ದಿತ್ತು. 2008ರಲ್ಲಿ ಜೆಡಿಎಸ್​ 28 ಸ್ಥಾನ ಮಾತ್ರ ಗೆದ್ದಿತ್ತು. 2013 ರಲ್ಲಿ 40 ಸ್ಥಾನ ಗೆದ್ದಿದ್ದ ಜೆಡಿಎಸ್‌, 2018ರಲ್ಲಿ 37 ಕ್ಷೇತ್ರಗಳಲ್ಲಿ ಗೆದ್ದಿತ್ತು.

2023 ರಲ್ಲಿ ಕೇವಲ 20 ಸ್ಥಾನಕ್ಕೆ ಜೆಡಿಎಸ್​ ಸೀಮಿತವಾಗಿದೆ. ಈ ಬಾರಿ ಜೆಡಿಎಸ್​ ಕಳಪೆ ಪ್ರದರ್ಶನ ಮಾಡಿದೆ. ಕಳೆದ 20 ವರ್ಷದಲ್ಲಿ ಇಷ್ಟೊಂದು ಹೀನಾಯ ಪ್ರದರ್ಶನ ಮಾಡಿರಲಿಲ್ಲ. ಕುಮಾರಸ್ವಾಮಿ ನಡೆಗೆ ಬೇಸರ ವ್ಯಕ್ತಪಡಿಸಿ ಅನೇಕ ನಾಯಕರು ಕಾಂಗ್ರೆಸ್​ ಸೇರಿದ್ದಾರೆ. ಈ ಬಾರಿ ಅಧಿಕಾರಕ್ಕೆ ಬರಬೇಕೆಂದು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ರಾಜ್ಯದ ಜನತೆ ಜೆಡಿಎಸ್‌ ಅನ್ನು ಕೈ ಹಿಡಿಯಲಿಲ್ಲ.

ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಕಾಂಗ್ರೆಸ್​ 135 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 66 ಮತ್ತು ಜೆಡಿಎಸ್​ 19 ಹಾಗೂ ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್​ ಸ್ಪಷ್ಟಬಹುಮತ ಸಾಧಿಸಿದ್ದು, ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್​ ಆಗಿದೆ.

2018ರ ಫಲಿತಾಂಶ ಏನಿತ್ತು?

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.

ಸಿದ್ದು ಸಿಎಂ, ಡಿಕೆಶಿ ಡಿಸಿಎಂ! ಸರ್ಕಾರ ರಚನೆಗೆ ಕಾಂಗ್ರೆಸ್​ ಸೂತ್ರ ರೆಡಿ? ನಾಳೆ ದೆಹಲಿಯಲ್ಲಿ ಮಹತ್ವದ ಸಭೆ

ಇಂದು ಸಂಜೆಯೇ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಾಧ್ಯತೆ

ಕಚೇರಿ ಪ್ರವೇಶಿಸುತ್ತಿದ್ದಂತೆ ಸಿಎಂಗೆ ಬುಸುಗುಟ್ಟಿದ ನಾಗಪ್ಪ, ಕೆಲಕಾಲ ಆತಂಕದ ವಾತಾವರಣ

Share This Article

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…