ಬೆಂಗಳೂರು: ಬಿಜೆಪಿ ಜತೆಗೆ ಮೈತ್ರಿ ವಿರೋಧಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಮೈತ್ರಿ ಘೋಷಣೆ ಆದಂದಿನಿಂದ ಜೆಡಿಎಸ್ ಪಾಳೆಯದಲ್ಲಿ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ಪರ್ವ ಶುರುವಾಗಿದೆ. ಕೆಲವು ಶಾಸಕರು ಮೈತ್ರಿ ಬಗ್ಗೆ ತೀವ್ರ ಅಪಸ್ವರ ಎತ್ತಿದ್ದಾರೆ. ಇನ್ನು ಕೆಲವರು ದೇವೇಗೌಡರ ಕುಟುಂಬದ ಮರ್ಜಿ ನೋಡಿಕೊಂಡು ಕಾದುನೋಡುವ ತಂತ್ರ ಅನುಸರಿಸುತ್ತಿದ್ದಾರೆ.
ಈ ಮಧ್ಯೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮೈತ್ರಿ ವಿರೋಧಿಸುವ ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರ ಜತೆ ಚರ್ಚಿಸಲು ಅ.16 ರಂದು ಸಭೆ ನಡೆಸಲಿದ್ದಾರೆ.
ಟ್ಯಾನರಿ ರಸ್ತೆಯ ಸಿ.ಎಂ.ಎ ಂಕ್ಷನ್ ಹಾಲ್ನಲ್ಲಿ ಈ ಸಭೆ ಆಯೋಜಿಸಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಕರೆದಿರುವ ಪ್ರತ್ಯೇಕ ಸಭೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.