More

    ಸ್ಟೇರಿಂಗ್ ಕಟ್​ ಆಗಿ ಪ್ರಪಾತಕ್ಕೆ ಉರುಳಿ ಬಿದ್ದ ಜೀಪ್; ಒಂದು ಸಾವು, 12 ಮಂದಿಗೆ ಗಾಯ, ಮೂವರ ಸ್ಥಿತಿ ಚಿಂತಾಜನಕ

    ಚಾಮರಾಜನಗರ: ಕರೊನಾ ಹಾವಳಿಯಿಂದ ಈಗಾಗಲೇ ಕಂಗೆಟ್ಟಿರುವ ಚಾಮರಾಜನಗರದ ಜನರಿಗೆ ಈಗ ಭೀಕರ ಅಪಘಾತದ ಸುದ್ದಿಯೊಂದು ಬಂದೆರಗಿದೆ. ಸ್ಟೇರಿಂಗ್ ಕಟ್ ಆದ ಕಾರಣ ಒಂದು ಜೀಪ್​ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಚಾಮರಾಜನಗರ ಮಲೈಮಹದೇಶ್ವರ ಬೆಟ್ಟದಲ್ಲಿ ಈ ಅಪಘಾತ ಸಂಭವಿಸಿದೆ. ಜೀಪ್​ನಲ್ಲಿದ್ದವರೆಲ್ಲ ತುಳಸೀಕೆರೆ ಗ್ರಾಮದವರಾಗಿದ್ದು, ಇವರೆಲ್ಲ ಇಂಡಿ ಇಂಡಿ ಬಸವೇಶ್ವರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಅಪಘಾತದಲ್ಲಿ ತುಳಸೀಕೆರೆಯ ವೀರಣ್ಣ (75) ಮೃತ ಪಟ್ಟಿದ್ದಾರೆ.

    ಇದನ್ನೂ ಓದಿ: ಸೋಂಕಿತ ತಾಯಿಯ ಶವಸಂಸ್ಕಾರಕ್ಕೆ ಮುಂದಾದ ಮಗನಿಗೆ ಗ್ರಾಮಸ್ಥರಿಂದ ವಿರೋಧ; ಕಾರಣವೇನು, ಆಮೇಲೇನಾಯಿತು?

    ಜೀಪ್​ 30 ಅಡಿ ಆಳಕ್ಕೆ ಉರುಳಿ ನಜ್ಜುಗುಜ್ಜಾಗಿದೆ. ಪ್ರಯಾಣಿಕರ ಪೈಕಿ 12 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ತಮಿಳುನಾಡಿನ ಮೆಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

    ಅಪ್ಪ-ಮಗ ಇಬ್ಬರೂ ಕರೊನಾಗೆ ಬಲಿ; ಸೋಂಕಿಗೆ ಒಳಗಾಗಿರುವ ಮತ್ತೊಬ್ಬ ಮಗನ ಪರಿಸ್ಥಿತಿ ಚಿಂತಾಜನಕ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts