ಶೃಂಗೇರಿ: ನೆಮ್ಮಾರು ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆ ವಿದ್ಯಾರ್ಥಿ ಜೀವನ್ಚಂದ್ರ ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು ಶಾಲೆಗೆ ಕೀರ್ತಿ ತಂದಿದ್ದಾನೆ.
ಶಾಲೆಯಲ್ಲಿ ಇದೇ ಪ್ರಥಮ ಬಾರಿಗೆ ನವೋದಯ ಪರೀಕ್ಷೆಯಲ್ಲಿ ವಿದ್ಯಾರ್ಥಿ ತೇರ್ಗಡೆ ಹೊಂದಿರುವುದರಿಂದ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶದಿಂದ ಬಂದಿರುವ ಜೀವನ್ಚಂದ್ರ ಹಂಚಿನಕೊಡಿಗೆ ಚಂದ್ರಶೇಖರ್ ಹಾಗೂ ಜ್ಯೋತಿ ಅವರ ಪುತ್ರ.