More

    ಪ್ರೇಯಸಿ ಶವ ತಂದು ರಸ್ತೆಬದಿ ಎಸೆದ ಪ್ರಕರಣ: ಜ.26ರ ರಾತ್ರಿ ಹೋಟೆಲ್​ ರೂಮ್ ಘಟನೆ ಬಿಚ್ಚಿಟ್ಟ ಪ್ರಿಯಕರ!​

    ಭುವನೇಶ್ವರ್​: ಒಡಿಶಾದ ಜಾಜ್​ಪುರ್​ ಜಿಲ್ಲೆಯ ಕೌಖಿಯಾ ಪೊಲೀಸ್​ ಠಾಣಾ ವ್ಯಾಪ್ತಿಯ ಮುಲಪಲಾದ ರಸ್ತೆ ಬದಿಯಲ್ಲಿ ಜನವರಿ 27ರಂದು ಸಂಶಯಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಆರೋಪಿ ಹಾಗೂ ಯುವತಿಯ ಪ್ರಿಕರನನ್ನು ಬಂಧಿಸಲಾಗಿದ್ದು, ಯುವತಿ ಸಾಯುವ ಮುನ್ನ ಅವರಿಬ್ಬರು ಹೋಟೆಲ್​ನಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ.

    ಪ್ರೇಯಸಿ ಶವ ತಂದು ರಸ್ತೆಬದಿ ಎಸೆದ ಪ್ರಕರಣ: ಜ.26ರ ರಾತ್ರಿ ಹೋಟೆಲ್​ ರೂಮ್ ಘಟನೆ ಬಿಚ್ಚಿಟ್ಟ ಪ್ರಿಯಕರ!​

    ಜನವರಿ 26ರಂದು ಪ್ರಿಯಕರ ರಾಕೇಶ್​ ಮತ್ತು ಯುವತಿ ಜರಾಫುಲಾ ನಾಯಕ್ ತಂಗಿದ್ದ​ ಭುವನೇಶ್ವರ್​ ಮೂಲದ ಹೋಟೆಲ್​ ರೂಮ್​ ಅನ್ನು ಜಾಜ್​ಪುರ್​ ಪೊಲೀಸರು ಸೀಜ್​ ಮಾಡಿದ್ದಾರೆ. ಧರ್ಮಾ ವಿಹಾರದಲ್ಲಿರುವ ಶಿವಸಾಯಿ ಗೆಸ್ಟ್​ಹೌಸ್​ನ ನಂ-201ನೇ ರೂಮ್​ನಲ್ಲಿ ಇಬ್ಬರ ತಂಗಿದ್ದರು. ಅವರಿದ್ದ ಕೊಠಡಿಯನ್ನು ಪೊಲೀಸ್​ ತಂಡವೊಂದು ಪರಿಶೀಲಿಸಿ, ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್​ ಜತೆಯಾಗಿ ಬಂದಿದ್ದ ವೈಜ್ಞಾನಿಕ ತಂಡ ಕೆಲವು ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ. ಹೋಟೆಲ್​ ಆವರಣದಲ್ಲಿನ ಸಿಸಿಟಿವಿ ಮತ್ತು ನೋಂದಣಿ ಪುಸ್ತಕವನ್ನು ಸಹ ಪೊಲೀಸರು ಪರೀಕ್ಷಿಸಿದ್ದಾರೆ.

    ಇದನ್ನೂ ಓದಿರಿ: ಸೆಕ್ಸ್​ ವೇಳೆ ದುರಂತ ಸಾವಿಗೀಡಾದ ವ್ಯಕ್ತಿ: ಮರಣೋತ್ತರ ವರದಿಯಲ್ಲಿತ್ತು ಬೆಚ್ಚಿಬೀಳಿಸೋ ಸಂಗತಿ!

    ಇನ್ನು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ರಾಕೇಶ್​, ಹೊಟೆಲ್​ ರೂಮ್​ನಲ್ಲಿ ಇಬ್ಬರು ದೈಹಿಕ ಸಂಪರ್ಕ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಮಾರನೇ ದಿನ ಬೆಳಗ್ಗೆ ಜರಾಫುಲ್ಲಾ ಪ್ರಜ್ಞೆಯಿಲ್ಲದ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿದ್ದಾನೆ. ಇದರಿಂದ ಗಾಬರಿಗೊಂಡ ಆತ ತಕ್ಷಣ ತನ್ನ ಸ್ನೇಹಿತ ಶೇಖರ್​ ಎಂಬಾತನನ್ನು ಕರೆ ಮಾಡಿ ಕರೆಸಿಕೊಂಡಿದ್ದಾನೆ. ಬಳಿಕ ಬೈಕ್​ನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಮಾರ್ಗ ಮಧ್ಯೆ ಆಕೆ ಮೃತಪಟ್ಟಿರುವುದು ತಿಳಿದು ಜಾಜ್​ಪುರದ ಕೌಖಿಯಾ ಏರಿಯಾದ ರಸ್ತೆ ಬದಿಯಲ್ಲಿ ಶವ ಎಸೆದು ಅಲ್ಲಿಂದ ಪರಾರಿಯಾಗಿದ್ದಾಗಿ ರಾಕೇಶ್​ ಬಾಯ್ಬಿಟ್ಟಿದ್ದಾನೆ. ಆದರೆ, ಜರಾಫುಲ್ಲಾ ಸಾವಿಗೆ ಕಾರಣ ಏನೆಂಬುದು ನಿಖರವಾಗಿ ತಿಳಿದುಬಂದಿಲ್ಲ.

    ಪ್ರೇಯಸಿ ಶವ ತಂದು ರಸ್ತೆಬದಿ ಎಸೆದ ಪ್ರಕರಣ: ಜ.26ರ ರಾತ್ರಿ ಹೋಟೆಲ್​ ರೂಮ್ ಘಟನೆ ಬಿಚ್ಚಿಟ್ಟ ಪ್ರಿಯಕರ!​

    ಘಟನೆ ಹಿನ್ನೆಲೆ ಏನು?
    ಒಡಿಶಾದ ಜಾಜ್​ಪುರ್​ ಜಿಲ್ಲೆಯ ಕೌಖಿಯಾ ಪೊಲೀಸ್​ ಠಾಣಾ ವ್ಯಾಪ್ತಿಯ ಮುಲಪಲಾದ ರಸ್ತೆ ಬದಿಯಲ್ಲಿ ಜನವರಿ 27ರಂದು ಯುವತಿಯ ಮೃತದೇಹವೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರಿಗೆ ಮೃತದೇಹವು ಯುವತಿ ಜರಾಫುಲಾ ನಾಯಕ್​ ಎಂದು ಗುರುತಿಸಿದರು. ಪ್ರಕರಣ ಸಂಬಂಧ ಜಾಜ್​ಪುರ್​ ಪೊಲೀಸರು ಕಮಿಷನರೇಟ್ ಪೊಲೀಸ್ ಸಹಕಾರದೊಂದಿಗೆ ಸುಂದರ್​​ಪಾದ ಏರಿಯಾದಲ್ಲಿ ದಾಳಿ ನಡೆಸಿ ಆರೋಪಿ ಹಾಗೂ ಜರಾಫುಲ್ಲಾ ಪ್ರಿಯಕರ ರಾಕೇಶ್​ ಬಂಧಿಸಲಾಯಿತು.

    ಇದನ್ನೂ ಓದಿರಿ: ಪತ್ನಿ ತುಂಬಾ ಚೆಲ್ಲುಚೆಲ್ಲು, ಹುಟ್ಟುವ ಮಗುವಿನ ಡಿಎನ್​ಎ ಪರೀಕ್ಷೆ ಮಾಡಿಸಬಹುದಾ?

    ಜರಾಫುಲಾ ಮಯೂರ್​ಬಂಜ್​ ಜಿಲ್ಲೆಯ ನಿವಾಸಿ. ಆರ್​ಡಿ ಮಹಿಳಾ ಯೂನಿವರ್ಸಿಟಿಯ ವಿದ್ಯಾರ್ಥಿನಿಯಾಗಿದ್ದ ಜರಾಫುಲಾ ಜನವರಿ 24ರಂದು ಆಕೆಯ ಚಕ್ರಧರ್ ಟೀಚರ್​ ಮಗಳ ಬರ್ತಡೇ ಕಾರ್ಯಕ್ರಮಕ್ಕೆ ತೆರಳುವುದಾಗಿ ಮನೆಗೆ ಹೇಳಿ ಹೊರಟ್ಟಿದ್ದಳು. 25ರಂದು ಬರ್ತಡೇ ಸಮಾರಂಭ ನಡೆದಿತ್ತು. ಮಾರನೇ ದಿನ ಅಂದರೆ 26ನೇ ತಾರೀಖು ಬೆಳಗ್ಗೆ 11 ಗಂಟೆಗೆ ಚಕ್ರಧರ್​, ಜಲಾಫುಲಾಳನ್ನು ಜಯದೇವ್​ ವಿವಾರ್​ ಸ್ಕ್ವೇರ್​ಗೆ ಡ್ರಾಪ್​ ಮಾಡಿದ್ದರು. ಖಾಸಗಿ ಬಸ್​ ಮೂಲಕ ಊರಿಗೆ ಮರಳಲು ಮುಂದಾಗಿದ್ದಳು. ಹೊಟ್ಟೆ ನೋವಿದೆ ಆಸ್ಪತ್ರೆಗೆ ಹೋಗಿ ನಂತರ ಬಸ್​ನಲ್ಲಿ ಊರಿಗೆ ಮರಳುತ್ತೇನೆಂದು ಹೇಳಿದ್ದಳು. ಆದರೆ, ಮಧ್ಯಾಹ್ನ 3 ಗಂಟೆಗೆ ಫೋನ್​ ಮಾಡಿ, ಹೊಟ್ಟೆ ನೋವಿದೆ, ಫ್ರೆಂಡ್ಸ್​ ಮನೆಯಲ್ಲಿ ಉಳಿದುಕೊಂಡಿರುವುದಾಗಿ ಮತ್ತು ನಾಳೆ ಬೆಳಗ್ಗೆ ಬರುವುದಾಗಿ ಹೇಳಿದಳು. ಅಂದು ರಾತ್ರಿಯಿಡಿ ಎಷ್ಟೇ ಫೋನ್​ ಮಾಡಿದರು ಸ್ವೀಕರಿಸಲಿಲ್ಲ ಎನ್ನುತ್ತಾರೆ ಜರಾಫುಲ್ಲಾಳ ತಂದೆ ರಮಾಕಾಂತ್​.

    ಪ್ರೇಯಸಿ ಶವ ತಂದು ರಸ್ತೆಬದಿ ಎಸೆದ ಪ್ರಕರಣ: ಜ.26ರ ರಾತ್ರಿ ಹೋಟೆಲ್​ ರೂಮ್ ಘಟನೆ ಬಿಚ್ಚಿಟ್ಟ ಪ್ರಿಯಕರ!​

    ಜರಾಫುಲಾಳ ಮೃತದೇಹ ಮಾರನೇ ದಿನ ಅಂದರೆ ಜ. 27ರಂದು ಮುಲಪಲಾದ ರಸ್ತೆಯ ಬದಿಯಲ್ಲಿ ಪತ್ತೆಯಾಗುತ್ತದೆ. ಮೃತದೇಹವನ್ನು ಪಕ್ಕದಲ್ಲಿ ಬಿದ್ದಿದ್ದ ಬ್ಯಾಗ್​ನಲ್ಲಿದ್ದ ಮಾಹಿತಿ ಆಧಾರದಲ್ಲಿ ವಿಳಾಸವನ್ನು ಪತ್ತೆ ಹಚ್ಚಿ ಮಾಹಿತಿ ನೀಡಲಾಗುತ್ತದೆ. ಇದರಿಂದ ಶಾಕ್​ ಆಗುವ ಕುಟುಂಬ ಶೋಕ ಸಾಗರದಲ್ಲಿ ಮುಳುಗುತ್ತದೆ. ತಕ್ಷಣವೇ ಸ್ಥಳೀಯ ಯುವಕನ ವಿರುದ್ಧ ಜರಾಫುಲಾಳ ತಂದೆ ಕೊಲೆ ಆರೋಪ ಮಾಡುತ್ತಾರೆ.

    ಇದನ್ನೂ ಓದಿರಿ: ದೇವಸ್ಥಾನಕ್ಕೆಂದು ಬೆಳ್ಳಂಬೆಳಗ್ಗೆಯೇ ಮನೆಬಿಟ್ಟ ಮಹಿಳೆ ಕೇವಲ 2 ಗಂಟೆಯಲ್ಲಿ ಕುಟುಂಬಕ್ಕೆ ಕೊಟ್ಟಳು ಶಾಕ್​!

    ಊರಿನಲ್ಲಿ ಪೈಪ್​ಲೈನ್​ ಕೆಲಸ ಮಾಡಿಕೊಂಡಿದ್ದ ರಾಕೇಶ್​ ನನ್ನ ಮಗಳನ್ನು ಲವ್​ ಮಾಡುತ್ತಿದ್ದ. ಲಾಕ್​ಡೌನ್​ ಬಳಿಕ ಯೂನಿವರ್ಸಿಟಿ ಬಿಟ್ಟು ಮಗಳು ಊರಿಗೆ ಬಂದಿದ್ದಾಗ ಇಬ್ಬರ ನಡುವೆ ಸಂಬಂಧ ಬೆಳೆದಿತ್ತು. ಇಬ್ಬರು ವಾಟ್ಸ್​ಆ್ಯಪ್​ ಮತ್ತು ವಿಡಿಯೋ ಕಾಲ್​ ಮೂಲಕ ಮಾತನಾಡುತ್ತಿದ್ದರು ಎಂದು ರಮಾಕಾಂತ್​ ದೂರಿದ್ದಾರೆ. ಅಲ್ಲದೆ, ಜರಾಫುಲ್ಲಾ ಭುವನೇಶ್ವರಕ್ಕೆ ಬಂದಾಗಲೆಲ್ಲ ರಾಕೇಶ್​ ಜತೆ ಹೆಚ್ಚು ಸಮಯ ಕಳೆಯುತ್ತಿದ್ದಳಂತೆ.

    ಪ್ರೇಯಸಿ ಶವ ತಂದು ರಸ್ತೆಬದಿ ಎಸೆದ ಪ್ರಕರಣ: ಜ.26ರ ರಾತ್ರಿ ಹೋಟೆಲ್​ ರೂಮ್ ಘಟನೆ ಬಿಚ್ಚಿಟ್ಟ ಪ್ರಿಯಕರ!​

    ಆರೋಪಿ ರಾಕೇಶ್​ ಸಿಕ್ಕಿಬಿದ್ದಿದ್ಹೇಗೆ?
    ಸಂಶಯಾಸ್ಪದ ರೀತಿಯಲ್ಲಿ ಜರಾಫುಲಾಳ ಮೃತದೇಹ ಪತ್ತೆಯಾದ ಮೇಲೆ ಅನುಮಾನಗೊಂಡ ಪೊಲೀಸರು ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಾರೆ. ಇಬ್ಬರು ಯುವಕರು ಸ್ಕೂಟರ್​ನಲ್ಲಿ ಬಂದು ಯುವತಿಯ ಮೃತದೇಹವನ್ನು ಎಸೆದು ಸ್ಕೂಟರ್​​ನಲ್ಲಿ ಪರಾರಿಯಾಗುವ ದೃಶ್ಯ ದಾಖಲಾಗಿರುತ್ತದೆ. ಸ್ಥಳೀಯರು ಸಹ ಇಬ್ಬರು ಯುವಕರು ಸ್ಕೂಟರ್​ನಲ್ಲಿ ಬಂದಿದ್ದಾಗಿ ಹೇಳುತ್ತಾರೆ. ಪ್ರಕರಣ ದಾಖಲಿಸಿಕೊಂಡು ಅಖಾಡಕ್ಕೆ ಇಳಿದ ಜಾಜ್​ಪುರ್​ ಪೊಲೀಸರು ಆರೋಪಿ ರಾಕೇಶ್​ನನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ. ರಾಕೇಶ್​ ಸ್ನೇಹಿತ ಶೇಖರ್​ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. (ಏಜೆನ್ಸೀಸ್​)

    ಸ್ಕೂಟರ್​ನಲ್ಲಿ ಶವ ಕೂರಿಸ್ಕೊಂಡು ಬಂದು ರಸ್ತೆ ಬದಿ ಎಸೆದ ಯುವಕರು: ಬರ್ತಡೇ ಪಾರ್ಟಿಗೆ ಹೋದವಳು ದುರಂತ ಅಂತ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts