More

    ಅಮಿತ್​ ಷಾ ಕುರಿತು ಅವಹೇಳನಕಾರಿ ಹೇಳಿಕೆ; ರಾಹುಲ್​ ಗಾಂಧಿ ಅರ್ಜಿ ವಜಾ ಮಾಡಿದ ಹೈಕೋರ್ಟ್

    ರಾಂಚಿ: 2018ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್​ ಷಾ ಅವರನ್ನು ಕೊಲೆ ಆರೋಪಿ ಎಂದು ಎಂದು ಕರೆದಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದೆ.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಂಬುಜನಾಥ್ ಅವರಿದ್ದ ಏಕಸದಸ್ಯ ಪೀಠವು ಫೆಬ್ರವರಿ 16ರಂದು ನೀಡಿದ್ದ ತೀರ್ಪನ್ನು ಕಾಯ್ದಿರಿಸಿದೆ. ರಾಹುಲ್​ ಗಾಂಧಿ ಪರ ವಕೀಲರಾದ ಪಿಯೂಷ್ ಚಿತ್ರೇಶ್ ಮತ್ತು ದೀಪಂಕರ್ ರೈ ವಾದ ಮಂಡಿಸಿದ್ದಾರೆ.

    ಈ ವಿಚಾರವು 2018ರಲ್ಲಿ ಚೈಬಾಸಾದಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ನೀಡಲಾದ ಹೇಳಿಕೆಯಾಗಿದ್ದು, ಇದು ಚುನಾವಣೆ ಪ್ರಚಾರದ ವೇಳೆ ನೀಡಲಾದ ಹೇಳಿಕೆ ಎಂದು ತಿಳಿದು ಬಂದಿದೆ. ಈ ಹೇಳಿಕೆ ಸಂಬಂಧ ಬಿಜೆಪಿ ಮುಖಂಡ ನವೀನ್ ಝಾ ಅವರು ರಾಹುಲ್‌ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts