ರಾಂಚಿ: 2018ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಷಾ ಅವರನ್ನು ಕೊಲೆ ಆರೋಪಿ ಎಂದು ಎಂದು ಕರೆದಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಂಬುಜನಾಥ್ ಅವರಿದ್ದ ಏಕಸದಸ್ಯ ಪೀಠವು ಫೆಬ್ರವರಿ 16ರಂದು ನೀಡಿದ್ದ ತೀರ್ಪನ್ನು ಕಾಯ್ದಿರಿಸಿದೆ. ರಾಹುಲ್ ಗಾಂಧಿ ಪರ ವಕೀಲರಾದ ಪಿಯೂಷ್ ಚಿತ್ರೇಶ್ ಮತ್ತು ದೀಪಂಕರ್ ರೈ ವಾದ ಮಂಡಿಸಿದ್ದಾರೆ.
ಈ ವಿಚಾರವು 2018ರಲ್ಲಿ ಚೈಬಾಸಾದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನೀಡಲಾದ ಹೇಳಿಕೆಯಾಗಿದ್ದು, ಇದು ಚುನಾವಣೆ ಪ್ರಚಾರದ ವೇಳೆ ನೀಡಲಾದ ಹೇಳಿಕೆ ಎಂದು ತಿಳಿದು ಬಂದಿದೆ. ಈ ಹೇಳಿಕೆ ಸಂಬಂಧ ಬಿಜೆಪಿ ಮುಖಂಡ ನವೀನ್ ಝಾ ಅವರು ರಾಹುಲ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.