More

    ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ; ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ: ಬಿಜೆಪಿ

    ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್​ ಹಿರೇಮಠ್​ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

    ಇನ್ನು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ ನಿಮ್ಮ ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ ಎಂಬುದಕ್ಕೆ ಉತ್ತರ ನೀಡಿ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದೆ.

    Capture

    ಇದನ್ನೂ ಓದಿ: ಕಾಲೇಜಿನಲ್ಲೇ ಚಾಕುವಿನಿಂದ ಇರಿದು ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಹತ್ಯೆ; ಆರೋಪಿ ಅರೆಸ್ಟ್​

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಜ್ಯ ಬಿಜೆಪಿ ಘಟಕ, ಅರಾಜಕತೆಯೇ ಆಡಳಿತದ ಧ್ಯೇಯ – ಕಾನೂನು ಸುವ್ಯವಸ್ಥೆ ಮಂಗಮಾಯ. ಇದು ಕಾಂಗ್ರೆಸ್​ ಸರ್ಕಾರದ ಆಡಳಿತ ಮಂತ್ರ. ಸಿಎಂ ಸಿದ್ದರಾಮಯ್ಯ ಅವರೇ, ಇದು ಅರಾಜಕತೆಯ ಹಾಗೂ ಓಲೈಕೆ ಆಡಳಿತದ ಪ್ರತಿಫಲವಾಗಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಮೇಲೆ ಫಯಾಜ್ ಚಾಕು ಇರಿದು ಸಾಯಿಸಿದ್ದಾನೆ. ನಿಮ್ಮ ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ ಎಂಬುದಕ್ಕೆ ಉತ್ತರ ನೀಡಿ ಎಂದು ವಾಗ್ದಾಳಿ ನಡೆಸಿದೆ.

    ಪ್ರೀತಿ ಮಾಡಲು ನಿರಾಕರಿಸಿದಳು ಎಂಬ ಕಾರಣಕ್ಕೆ ಫಯಾಜ್​ ಎಂಬಾತ ಬಿವಿಬಿ ಕಾಲೇಜಿನಲ್ಲಿ ಎಂಸಿಎ ವ್ಯಾಸಂಗ ಮಾಡುತ್ತಿದ್ದ ನೇಹಾ ಹಿರೇಮಠ್​ಗೆ ಚಾಕುವಿನಿಂದ 9ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾನೆ. ಈ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts