ಮುಂಬೈ: ನಾನು ಭಾರತ ಹಾಗೂ ಮಹಾರಾಷ್ಟ್ರದ ಭವ್ಯ ಭವಿಷ್ಯಕ್ಕಾಗಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿದ್ದೇನೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.
ಭಾನುವಾರ ಬಾರಾಮತಿಯಲ್ಲಿ ಸಮಾವೇಶವನ್ನುದ್ಧೇಶಿಸಿ ಮಾತನಾಡುವ ವೇಳೆ ರಾಜಕೀಯದಲ್ಲಿ ಯಾರು ಮಿತ್ರರು ಅಲ್ಲ ಶತ್ರುಗಳಲ್ಲ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದರು.
ಇದನ್ನೂ ಓದಿ: ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಸೋಮವಾರ ಮರಾಠವಾಡ ಪ್ರಾಂತ್ಯದಲ್ಲಿ ಎನ್ಸಿಪಿ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಅಜಿತ್ ಪವಾರ್ ನಾನು ಭಾರತದ ಹಾಗೂ ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದೇನೆ. ನಮ್ಮ ಮುಂದಿರುವ ಏಕೈಕ ವಿಷಯವೆಂದರೆ ಅದು ರಾಜ್ಯದ ಅಭಿವೃದ್ದಿ ಹಾಗೂ ಪ್ರಧಾನಿ ಮೋದಿ ಅವರ ನಾಯಕತ್ವ ಎಂದು ಹೇಳಿದ್ದಾರೆ.
ನನ್ನ ನೀತಿಗಳು ಹಾಗೂ ಕಾರ್ಯಗಳು ಸದಾ ಅಭಿವೃದ್ದಿಯ ದಿಕ್ಕಿನಲ್ಲಿ ಸಾಗುತ್ತವೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಮಾವೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಹೇಳಿದ್ದಾರೆ.