ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಜಾಮೀನು ಮಂಜೂರು

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪ ಎದುರಿಸುತ್ತಿರುವ ಎನ್.ಮೋಹನ್ ನಾಯಕ್ ಅಲಿಯಾಸ್ ಸಂಪಾಜೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಒಟ್ಟು ಪ್ರಕರಣದಲ್ಲಿ ೧೮ ಆರೋಪಿಗಳಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಲಿರುವ ಮೊದಲ ಆರೋಪಿ ಮೋಹನ್ ನಾಯಕ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಎನ್.ಮೋಹನ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿಯನ್ನುನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಪ್ರಕರಣದಲ್ಲಿ ೧೧ನೇ ಆರೋಪಿಯಾಗಿರುವ ಮೋಹನ್ … Continue reading ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಜಾಮೀನು ಮಂಜೂರು