More

    ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ವಸಂತ ಮಡ್ಲೂರ

    ಗದಗ: 2023-24 ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಗದಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ  ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

    ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ  ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಪರಿಶಿಷ್ಟ ಜಾತಿ ಓರ್ವ ಹಾಗೂ ಪರಿಶಿಷ್ಟ ಪಂಗಡದ ಓರ್ವ ಅಭ್ಯರ್ಥಿಗಳನ್ನು  ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸಲು ನವೆಂಬರ್  30 ಕೊನೆಯ ದಿನವಾಗಿದೆ.  ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000/ರೂ.ಗಳ ಸ್ಟೈಪಂಡ್ ನೀಡಲಾಗುವುದು. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸುವಂತೆ ಒತ್ತಡ ತರುವಂತಿಲ್ಲ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.

    ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

    ಆಸಕ್ತರು ಅರ್ಜಿ ನಮೂನೆ ಹಾಗೂ  ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 30, ಗದಗ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಗದಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ. ಮಡ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts