More

    ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದೆ ಸಂಘಟನೆ

    ರಾಯಚೂರು: ಪತ್ರಕರ್ತರ ವೃತ್ತಿ ನೈಪುಣ್ಯತೆ ಹೆಚ್ಚಿಸುವ ಜತೆಗೆ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಆರ್ಥಿಕ ನೆರವು, ದತ್ತಿ ಕಾರ್ಯಕ್ರಮಗಳು, ತರಬೇತಿ, ಪುಸ್ತಕ ಪ್ರಕಟಣೆ ಕಾರ್ಯಗಳನ್ನು ಕೈಗೆತ್ತಿಕೊಂಡು ಬಹುಮುಖ ಕಾರ್ಯ ಮಾಡಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
    ಪಟ್ಟಣದ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ರಾಯಚೂರು ರಿರ್ಪೋಟರ್ಸ್‌ ಗಿಲ್ಡ್ ಹಾಗೂ ಸಂಪಾದಕರ ಸಂಘದ ಸಹಯೋಗದಲ್ಲಿ ಆಯೋಜಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. 91ನೇ ವಸಂತಕ್ಕೆ ಕಾಲಿಟ್ಟಿರುವ ಸಂಘ ಅನೇಕ ಏರಿಳಿತದ ನಡುವೆ ತಾಯಿಬೇರಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
    ಕೋವಿಡ್ ಅಗ್ನಿ ಪರೀಕ್ಷೆಯಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಯಿತು. ಸಂಘಟನೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೋವಿಡ್‌ನಲ್ಲಿ ಜೀವಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಅಲ್ಲದೇ ಆಪತ್ಬಾಂಧವ ಗ್ರೂಪ್ ಮಾಡಿ 18 ಜನರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts