More

    ಬೆಣ್ಣೆನಗರಿಯಲ್ಲಿ 3 ಮತ್ತು 4 ರಂದು 38ನೇ ರಾಜ್ಯ ಪತ್ರಕರ್ತರ ಸಮ್ಮೇಳನ 3 ಗೋಷ್ಠಿಗಳು, ಸಂವಾದ, ಪ್ರಶಸ್ತಿ ಪ್ರದಾನ

    ಬೆಂಗಳೂರು:
    ಬೆಣ್ಣೆ ನಗರಿ ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಆಯೋಜಿಸಿರುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ೆ.3 ಮತ್ತು 4 ರಂದು ಎರಡು ದಿನಗಳ ಕಾಲ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಏರ್ಪಾಡಾಗಿರುವ ಈ ಸಮ್ಮೇಳನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ನಾಲ್ಕು ಸಾವಿರಕ್ಕಕೂ ಹೆಚ್ಚು ಮಾಧ್ಯಮ ಮಿತ್ರರು ಭಾಗವಹಿಸುವ ನಿರೀಕ್ಷೆ ಇದೆ. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದರು.
    ಮೂರು ದಶಕಗಳ ಬಳಿಕ ದಾವಣಗೆರೆಯಲ್ಲಿ ನಡೆಯುತ್ತಿರುವ ಸಮ್ಮೇಳನ ಹಲವು ವೈಶಿಷ್ಟಗಳನ್ನು ಒಳಗೊಂಡಿದೆ. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವ ನಮ್ಮೆಲ್ಲರಿಗೆ ಈ ಸಮ್ಮೇಳನವು ಪತ್ರಕರ್ತರ ಹಬ್ಬವಾಗಿದೆ. ಎರಡು ದಿನಗಳ ಕಾಲ ಚಿಂತನ ಮಂಥನ ನಡೆಸುವ ಮೂಲಕ ನಾಡಿನ ಪತ್ರಕರ್ತರು ಈ ಸಮ್ಮೇಳನವನ್ನು ಸಾಕ್ಷೀಕರಿಸಲಿದ್ದಾರೆ ಎಂದರು.

    ಆಕರ್ಷಕ ಮೆರವಣಿಗೆ
    ಫೆಬ್ರವರಿ 3ರ ಬೆಳಿಗ್ಗೆ 9 ಗಂಟೆಗೆ ಹರ್ಡೇಕರ ಮಂಜಪ್ಪ, ಮಹಾತ್ಮಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನರಾಂ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ನಂತರ ಶ್ರೀ ಜಯದೇವ ಮುರುಘರಾಜೇಂದ್ರ ವೃತ್ತದಿಂದ ಮಾಧ್ಯಮದ ಮಿತ್ರರ ಮೆರವಣಿಗೆ ನಡೆಯಲಿದೆ ಎಂದರು. ಸಾರೋಟಿನಲ್ಲಿ ಇರಿಸಲಾಗುವ ವೃಕ್ಷದ ಆಕೃತಿಯಲ್ಲಿ ಬರುವ ರಂಬೆ-ಕೊಂಬೆಗಳಲ್ಲಿ ಎಲ್ಲಾ ಪತ್ರಿಕೆಗಳ ಶಿರೋನಾಮೆಗಳನ್ನು ಬಿಂಬಿಸಲಾಗುವುದು. ಮೆರವಣಿಗೆಯಲ್ಲಿ ಕಲಾ ತಂಡಗಳು ಗಮನ ಸೆಳೆಯಲಿವೆ ಪತ್ರಕರ್ತರು, ಸಾಹಿತಿಗಳು, ಕನ್ನಡಪರ ಹೋರಾಟಗಾರರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
    ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಉಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬಿಡುಗಡೆ ಮಾಡುವರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಅವರು ವಸ್ತು ಪ್ರದರ್ಶವನ್ನು, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ವ್ಯಂಗ್ಯ ಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರೂ, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿದ್ದಾರೆ.

    ಮಧ್ಯಾಹ್ನ 2 ಗಂಟೆಗೆ ಕೃತಕ ಬುದ್ಧಿಮತ್ತೆ ಮತ್ತು ಮಾಧ್ಯಮಗಳ ಭವಿಷ್ಯ’ ಗೋಷ್ಠಿಯನ್ನು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ.ಕೆ.ರವಿ ಉದ್ಘಾಟಿಸಲಿದ್ದಾರೆ. ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆ ವಹಿಸಲಿದ್ದು, ಶ್ರೀಜಾ ಅವರು ವಿಷಯ ಪ್ರಸ್ತಾವನೆ ಮಾಡುವರು.
    ಸಂಜೆ 4 ಗಂಟೆಗೆ ’ಪತ್ರಿಕೆಗಳು ಹಿಂದೆ-ಇಂದು-ಮುಂದು ’ವಿಷಯ ಗೋಷ್ಠಿಯನ್ನು ಬಿ.ಎನ್.ಮಲ್ಲೇಶ್ ಉದ್ಘಾಟಿಸಲಿದ್ದು, ಬಸವರಾಜಸ್ವಾಮಿ ಅಧ್ಯಕ್ಷತೆ ವಹಿಸುವರು. ಟಿ.ಗುರುರಾಜ್ ವಿಷಯ ಪ್ರಸ್ತಾವನೆ ಮಾಡಲಿದ್ದಾರೆ. ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

    ಎರಡನೇ ದಿನದ ಗೋಷ್ಠಿಗಳು
    ೆ.4ರಂದು ಭಾನುವಾರ ಬೆಳಿಗ್ಗೆ 9.45ಕ್ಕೆ ಪ್ರತಿನಿಧಿಗಳ ಸಮಾವೇಶ ಜರುಗಲಿದೆ. ಬೆಳಿಗ್ಗೆ 10.30ಕ್ಕೆ ’ಮಾಧ್ಯಮ ಮತ್ತು ಸರ್ಕಾರ ನಡೆಯಲಿದ್ದು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಗೋಷ್ಠಿ ಉದ್ಘಾಟಿಸಲಿದ್ದಾರೆ. ಅಬ್ಬೂರು ರಾಜಶೇಖರ್ ವಿಷಯ ಪ್ರಸ್ತಾವನೆ ಮಾಡಲಿದ್ದಾರೆ. ವಾರ್ತಾ ಇಲಾಖೆ ಆಯುಕ್ತರು ಅಧ್ಯಕ್ಷತಯೆ ವಹಿಸುವರು. ಬೆಳಿಗ್ಗೆ 11.30ಕ್ಕೆ ’ಸಾಮಾಜಿಕ ಮಾಧ್ಯಮ – ವೃತ್ತಿ ವಿಶ್ವಾಸಾರ್ಹತೆ ವಿಷಯಗಳ ಕುರಿತ ಗೋಷ್ಠಿಯನ್ನು
    ನಾಡಿನ ಹಿರಿಯ ಪತ್ರಕರ್ತ ಎಸ್.ಕೆ. ಶೇಷಚಂದ್ರಿಕಾ ಉದ್ಘಾಟಿಸಲಿದ್ದಾರೆ. ರುದ್ರಣ್ಣ ಹರ್ತಿಕೋಟೆ ಅಧ್ಯಕ್ಷತೆ ವಹಿಸಲಿದಿದಾರೆ. ನಾಡಿನ ಹಿರಿಯ ಕಿರಿಯ ಪತ್ರಕರ್ತರು ಗೋಷ್ಠಿಯಲ್ಲಿ ಭಾಗವಹಿಸಲಿದಿದಾರೆ.

    ಪ್ರಶಸ್ತಿ ಪ್ರದಾನ ಸಮಾರಂಭ
    ಮಧ್ಯಾಹ್ನ 2 ಗಂಟೆಗೆ ಜರುಗಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾರೋಪದ ನುಡಿಗಳನ್ನಾಡುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಲೋಕಸಭಾ ಸದಸ್ಯ ಜಿ.ಎಂಸಿದ್ದೇಶ್ವರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಮಹಿಳಾ-ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್‌ಕರ್, ಅರಣ್ಯ – ಪರಿಸರ ಸಚಿವ ಈಶ್ವರ ಖಂಡ್ರೆ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲೆಯ ಶಾಸಕರುಗಳು ವಿಶೇಷ ಆಹ್ವಾನಿತರಾಗಿದ್ದಾರೆ ಎಂದು ಹೇಳಿದರು.
    ಎರಡು ದಿನದ ಸಮ್ಮೇಳನದಲ್ಲಿ ಪತ್ರಕರ್ತರು ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಶಿವಾನಂದ ತಗಡೂರು ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts