ನವದೆಹಲಿ: 2022ರಲ್ಲಿ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಆದೇಶಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ಗೆ ಇದೀಗ ದುರುದ್ದೇಶಪೂರಿತ ಕರೆಗಳು ಮತ್ತು ಅಂತಾರಾಷ್ಟ್ರೀಯ ಸಂಖ್ಯೆಗಳಿಂದ ಕೊಲೆ ಬೆದರಿಕೆ ಕರೆ ಬರುತ್ತಿದ್ದು, ಈ ಬಗ್ಗೆ ಸ್ವತಃ ಅವರೇ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ: ರೈಲಿಗೆ ಸಿಲುಕಿ ಮೂವರು ಯುವಕರ ದುರ್ಮರಣ; ಛಿದ್ರವಾದ ಮೃತದೇಹಗಳು
ಬರೇಲಿ ಪೊಲೀಸ್ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ನ್ಯಾಯಮೂರ್ತಿ ದಿವಾಕರ್ ಅವರು, ಏಪ್ರಿಲ್ 15ರಂದು ಅಂತಾರಾಷ್ಟ್ರೀಯ ಸಂಖ್ಯೆಯಿಂದ ಕರೆ ಸ್ವೀಕರಿಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಈ ಘಟನೆ ನಡೆದ ಕೆಲವು ದಿನಗಳ ನಂತರ ಇದೇ ರೀತಿಯ ಮತ್ತೊಂದು ಕರೆ ಬಂದಿದೆ. ಇತ್ತೀಚೆಗಷ್ಟೇ ಬರೇಲಿಗೆ ವರ್ಗಾವಣೆಗೊಂಡಿರುವ ನ್ಯಾಯಮೂರ್ತಿ ದಿವಾಕರ್ ಅವರು, ತನಗೆ ಮತ್ತು ಅವರ ಕುಟುಂಬಕ್ಕೆ ಬೆದರಿಕೆಗಳು ಬಂದಿದ್ದವು ಎಂದು ಈ ಹಿಂದೆಯೂ ಗಂಭೀರವಾಗಿ ಆರೋಪಿಸಿದ್ದರು.
ಆದರೆ, ಇದು ಪದೇ ಪದೇ ಮರುಕಳಿಸುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಧೀಶರು ಕೋರಿದ್ದಾರೆ. ಬರೇಲಿಗೆ ವರ್ಗಾವಣೆಗೊಂಡ ಬಳಿಕ ನ್ಯಾಯಮೂರ್ತಿ ದಿವಾಕರ್ ಅವರು 2018ರ ಬರೇಲಿ ಗಲಭೆ ಪ್ರಕರಣದಲ್ಲಿ ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದ್ದರು. 2018ರ ಬರೇಲಿ ದಂಗೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಿ ಮೌಲಾನಾ ತೌಕೀರ್ ರಝಾ ಅವರನ್ನು ವಿಚಾರಣೆ ಎದುರಿಸುವಂತೆ ಆದೇಶಿಸಿದ್ದರು. ಗಲಭೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದ್ದು, ಬರೇಲಿಯಲ್ಲಿ 27 ದಿನಗಳ ಕಾಲ ಕರ್ಫ್ಯೂ ವಿಧಿಸಲಾಗಿತ್ತು. ಈ ಎಲ್ಲಾ ಘಟನೆಗಳ ಬೆನ್ನಲ್ಲೇ ಈಗ ಜೀವ ಬೆದರಿಕೆ ಕರೆಗಳು ಬಂದಿರುವುದು ಗಮನಾರ್ಹ.
ಇದನ್ನೂ ಓದಿ: ನೇಹಾ ಹತ್ಯೆ ಪ್ರಕರಣ: ಈ ವಿಷಯದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ
ಬೆದರಿಕೆಗಳ ಬಗ್ಗೆ ನ್ಯಾಯಾಧೀಶರು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ವೈ-ಕೆಟಗರಿ ಭದ್ರತೆಯನ್ನು ಆದೇಶಿಸಿತ್ತು. ಆದಾಗ್ಯೂ, ನಂತರ ಅದನ್ನು X ವರ್ಗಕ್ಕೆ ಇಳಿಸಿತ್ತು. ನ್ಯಾಯಾಧೀಶರ ಪ್ರಸ್ತುತ ಭದ್ರತಾ ವಿವರವು ಇಬ್ಬರು ಭದ್ರತಾ ಸಿಬ್ಬಂದಿಯನ್ನು ಮಾತ್ರ ಒಳಗೊಂಡಿದೆ. ಇಬ್ಬರೂ ಸಿಬ್ಬಂದಿಗಳು ಶಸ್ತ್ರಾಸ್ತ್ರಗಳನ್ನು ಹೊಂದಿಲ್ಲದ ಕಾರಣ ಇದು ಹೆಚ್ಚು ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಅವರ ಸಹೋದ್ಯೋಗಿಯೊಬ್ಬರು ಹೇಳಿದ್ದಾರೆ,(ಏಜೆನ್ಸೀಸ್).
ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್ ಜ್ಯಾಕ್ಸ್ ಬಿಚ್ಚಿಟ್ರು ಶಾಕಿಂಗ್ ಸಂಗತಿ
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು